4:55 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ

25/11/2021, 14:36

ಮಂಗಳೂರು(reporterkarnataka.com):

ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿತಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲೆ ಮಂಗಳೂರಿನಲ್ಲಿ ರಾಮಕೃಷ್ಣ ಆಶ್ರಮದ ಸ್ಥಾಪನೆಯಾಯಿತು. ಹೀಗಾಗಿ ದೇಶದ ಅಮೃತ ಮಹೋತ್ಸವ ಸಂದರ್ಭದಲ್ಲಿಯೇ ರಾಮಕೃಷ್ಣ ಮಠ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ ಎಂದರು.

ರಾಜ್ಯ ಸರಕಾರ ನೀಡಿದ ವಿಶೇಷ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿಗೆ ರಾಮಕೃಷ್ಣ ಮಿಶನ್ ಭಾಜನವಾಗಿದೆ. ಹೀಗಾಗಿ ವಿಶೇಷ ಸಂದರ್ಭದಲ್ಲಿ ರಾಮಕೃಷ್ಣ ಮಠಕ್ಕೆ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ಗೌರವಾಭಿವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 

 ಗೌರಾವಭಿನಂದನಾ ಸಮಿತಿಯ ದಿಲ್‌ರಾಜ್ ಆಳ್ವ, ಉಮಾನಾಥ್ ಕೋಟೆಕಾರ್, ಹರೀಶ್ ಆಚಾರ್ಯ, ಶುಭೋದಯ ಆಳ್ವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು