1:28 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಅಮೃತ ಮಹೋತ್ಸವ: ನ.27ರಂದು ಮಂಗಳೂರು ರಾಮಕೃಷ್ಣ ಮಠಕ್ಕೆ ಗೌರವಾಭಿನಂದನೆ ಹಾಗೂ ಪೌರಸಮ್ಮಾನ

25/11/2021, 14:36

ಮಂಗಳೂರು(reporterkarnataka.com):

ಅಮೃತ ಮಹೋತ್ಸವದ ಹೊಸ್ತಿಲಲ್ಲಿರುವ ಮಂಗಳೂರಿನ ಹೆಮ್ಮೆಯ ಆಧ್ಯಾತ್ಮಿಕ ಕೇಂದ್ರ ರಾಮಕೃಷ್ಣ ಮಠಕ್ಕೆ ಮಂಗಳೂರಿನ ನಾಗರಿಕರಿಂದ ಗೌರವಾಭಿವಂದನೆ ಹಾಗೂ ಪೌರಸಮ್ಮಾನ ಕಾರ್ಯಕ್ರಮ ನ.27ರಂದು ಸಂಜೆ 6 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಗೌರವಾಭಿನಂದನಾ ಸಮಿತಿಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಸಂದರ್ಭದಲ್ಲೆ ಮಂಗಳೂರಿನಲ್ಲಿ ರಾಮಕೃಷ್ಣ ಆಶ್ರಮದ ಸ್ಥಾಪನೆಯಾಯಿತು. ಹೀಗಾಗಿ ದೇಶದ ಅಮೃತ ಮಹೋತ್ಸವ ಸಂದರ್ಭದಲ್ಲಿಯೇ ರಾಮಕೃಷ್ಣ ಮಠ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ ಎಂದರು.

ರಾಜ್ಯ ಸರಕಾರ ನೀಡಿದ ವಿಶೇಷ ಅಮೃತ ಮಹೋತ್ಸವ ರಾಜ್ಯೋತ್ಸವ ಪ್ರಶಸ್ತಿಗೆ ರಾಮಕೃಷ್ಣ ಮಿಶನ್ ಭಾಜನವಾಗಿದೆ. ಹೀಗಾಗಿ ವಿಶೇಷ ಸಂದರ್ಭದಲ್ಲಿ ರಾಮಕೃಷ್ಣ ಮಠಕ್ಕೆ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ಗೌರವಾಭಿವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. 

 ಗೌರಾವಭಿನಂದನಾ ಸಮಿತಿಯ ದಿಲ್‌ರಾಜ್ ಆಳ್ವ, ಉಮಾನಾಥ್ ಕೋಟೆಕಾರ್, ಹರೀಶ್ ಆಚಾರ್ಯ, ಶುಭೋದಯ ಆಳ್ವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು