2:49 PM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ

21/06/2021, 16:58

ರಾಹುಲ್ ಅಥಣಿ ಬೆಳಗಾವಿ
ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.  

ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ಮಾದ್ಯಮ ಜೊತೆ ಮಾತನಾಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೊಗಿಲ್ಲ, ಅವರ ಕ್ಷೇತ್ರದಲ್ಲಿ ಇರುವರು, ಮತ್ತೆ ನಾನು ಬಾಂಬೆಗೆ ಹೋಗಿದ್ದೇನೆ ಎಂಬ ಸುದ್ದಿಗಳು ಬರುತ್ತಿದ್ದವು, ನಾನು ಕೂಡ ಅಥಣಿ ಕ್ಷೇತ್ರದಲ್ಲಿ ಇದ್ದೆನೆ, 15 ಜನ ಶಾಸಕರು ಅವರವರ ಕ್ಷೇತ್ರದಲ್ಲಿ ಇರಬಹುದು, ಅವರನ್ನು ನೀವು ಕೇಳಿ. ನಾನು ಮಾತ್ರ ಅಥಣಿಯಲ್ಲಿ ಇದ್ದೇನೆ ಎಂದರು.

17 ಜನ ಶಾಸಕರಿಂದ ಬಿಜೆಪಿ ಸರ್ಕಾರದಲ್ಲಿ ಗೊಂದಲವಾಗಿದೆ  ಎಂಬ ಸಚಿವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಸಿದ ಕಮಟಳ್ಳಿ ,

 ಈಶ್ವರಪ್ಪನವರು ನಮ್ಮ ಹಿರಿಯರು, ನಮ್ಮನ್ನು ಅತಿ ಪ್ರೀತಿಯಿಂದ ಕಾಣುವರು. ಅವರ ಇಲಾಖೆಯಲ್ಲಿ ನಮ್ಮ ಕ್ಷೇತ್ರಕ್ಕೆ ಬೇಕಾದ ಕೆಲಸಗಳನ್ನು ಮುತುವರ್ಜಿಯಿಂದ ಮಾಡುತ್ತಾರೆ. ಆ ಅರ್ಥದಲ್ಲಿ ಅವರು ಮಾತನಾಡಿಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ಪ್ರಶ್ನೆಯಿಲ್ಲ. ಸುಮ್ಮನೆ ವದಂತಿಗಳು ಹರಿದಾಡುತ್ತಿದೆ, ಮೊನ್ನೆ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಅದಕ್ಕೆಲ್ಲ ತೆರೆ ಎಳೆದಿದ್ದಾರೆ. ನಾನು ಸಿಎಂ ಪರವಾಗಿ ಇರುವನು. ನಮ್ಮ ಬೆಂಬಲ ಬಿಎಸವೈ ಎಂದು ಪ್ರತಿಕ್ರಿಯಿಸಿದರು.

ಸಚಿವ ಶ್ರೀಮಂತ ಪಾಟೀಲ್ ತಮ್ಮ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಅದ್ಲು ಬದಲು ಆಗುವುದಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು