11:45 PM Saturday14 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ

21/06/2021, 16:58

ರಾಹುಲ್ ಅಥಣಿ ಬೆಳಗಾವಿ
ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.  

ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ಮಾದ್ಯಮ ಜೊತೆ ಮಾತನಾಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೊಗಿಲ್ಲ, ಅವರ ಕ್ಷೇತ್ರದಲ್ಲಿ ಇರುವರು, ಮತ್ತೆ ನಾನು ಬಾಂಬೆಗೆ ಹೋಗಿದ್ದೇನೆ ಎಂಬ ಸುದ್ದಿಗಳು ಬರುತ್ತಿದ್ದವು, ನಾನು ಕೂಡ ಅಥಣಿ ಕ್ಷೇತ್ರದಲ್ಲಿ ಇದ್ದೆನೆ, 15 ಜನ ಶಾಸಕರು ಅವರವರ ಕ್ಷೇತ್ರದಲ್ಲಿ ಇರಬಹುದು, ಅವರನ್ನು ನೀವು ಕೇಳಿ. ನಾನು ಮಾತ್ರ ಅಥಣಿಯಲ್ಲಿ ಇದ್ದೇನೆ ಎಂದರು.

17 ಜನ ಶಾಸಕರಿಂದ ಬಿಜೆಪಿ ಸರ್ಕಾರದಲ್ಲಿ ಗೊಂದಲವಾಗಿದೆ  ಎಂಬ ಸಚಿವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಸಿದ ಕಮಟಳ್ಳಿ ,

 ಈಶ್ವರಪ್ಪನವರು ನಮ್ಮ ಹಿರಿಯರು, ನಮ್ಮನ್ನು ಅತಿ ಪ್ರೀತಿಯಿಂದ ಕಾಣುವರು. ಅವರ ಇಲಾಖೆಯಲ್ಲಿ ನಮ್ಮ ಕ್ಷೇತ್ರಕ್ಕೆ ಬೇಕಾದ ಕೆಲಸಗಳನ್ನು ಮುತುವರ್ಜಿಯಿಂದ ಮಾಡುತ್ತಾರೆ. ಆ ಅರ್ಥದಲ್ಲಿ ಅವರು ಮಾತನಾಡಿಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ಪ್ರಶ್ನೆಯಿಲ್ಲ. ಸುಮ್ಮನೆ ವದಂತಿಗಳು ಹರಿದಾಡುತ್ತಿದೆ, ಮೊನ್ನೆ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಅದಕ್ಕೆಲ್ಲ ತೆರೆ ಎಳೆದಿದ್ದಾರೆ. ನಾನು ಸಿಎಂ ಪರವಾಗಿ ಇರುವನು. ನಮ್ಮ ಬೆಂಬಲ ಬಿಎಸವೈ ಎಂದು ಪ್ರತಿಕ್ರಿಯಿಸಿದರು.

ಸಚಿವ ಶ್ರೀಮಂತ ಪಾಟೀಲ್ ತಮ್ಮ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಅದ್ಲು ಬದಲು ಆಗುವುದಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು