8:35 PM Saturday4 - April 2026
ಬ್ರೇಕಿಂಗ್ ನ್ಯೂಸ್
Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ

21/06/2021, 16:58

ರಾಹುಲ್ ಅಥಣಿ ಬೆಳಗಾವಿ
ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.  

ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ಮಾದ್ಯಮ ಜೊತೆ ಮಾತನಾಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೊಗಿಲ್ಲ, ಅವರ ಕ್ಷೇತ್ರದಲ್ಲಿ ಇರುವರು, ಮತ್ತೆ ನಾನು ಬಾಂಬೆಗೆ ಹೋಗಿದ್ದೇನೆ ಎಂಬ ಸುದ್ದಿಗಳು ಬರುತ್ತಿದ್ದವು, ನಾನು ಕೂಡ ಅಥಣಿ ಕ್ಷೇತ್ರದಲ್ಲಿ ಇದ್ದೆನೆ, 15 ಜನ ಶಾಸಕರು ಅವರವರ ಕ್ಷೇತ್ರದಲ್ಲಿ ಇರಬಹುದು, ಅವರನ್ನು ನೀವು ಕೇಳಿ. ನಾನು ಮಾತ್ರ ಅಥಣಿಯಲ್ಲಿ ಇದ್ದೇನೆ ಎಂದರು.

17 ಜನ ಶಾಸಕರಿಂದ ಬಿಜೆಪಿ ಸರ್ಕಾರದಲ್ಲಿ ಗೊಂದಲವಾಗಿದೆ  ಎಂಬ ಸಚಿವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಸಿದ ಕಮಟಳ್ಳಿ ,

 ಈಶ್ವರಪ್ಪನವರು ನಮ್ಮ ಹಿರಿಯರು, ನಮ್ಮನ್ನು ಅತಿ ಪ್ರೀತಿಯಿಂದ ಕಾಣುವರು. ಅವರ ಇಲಾಖೆಯಲ್ಲಿ ನಮ್ಮ ಕ್ಷೇತ್ರಕ್ಕೆ ಬೇಕಾದ ಕೆಲಸಗಳನ್ನು ಮುತುವರ್ಜಿಯಿಂದ ಮಾಡುತ್ತಾರೆ. ಆ ಅರ್ಥದಲ್ಲಿ ಅವರು ಮಾತನಾಡಿಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ಪ್ರಶ್ನೆಯಿಲ್ಲ. ಸುಮ್ಮನೆ ವದಂತಿಗಳು ಹರಿದಾಡುತ್ತಿದೆ, ಮೊನ್ನೆ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಅದಕ್ಕೆಲ್ಲ ತೆರೆ ಎಳೆದಿದ್ದಾರೆ. ನಾನು ಸಿಎಂ ಪರವಾಗಿ ಇರುವನು. ನಮ್ಮ ಬೆಂಬಲ ಬಿಎಸವೈ ಎಂದು ಪ್ರತಿಕ್ರಿಯಿಸಿದರು.

ಸಚಿವ ಶ್ರೀಮಂತ ಪಾಟೀಲ್ ತಮ್ಮ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಅದ್ಲು ಬದಲು ಆಗುವುದಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು