10:13 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ರಮೇಶ್ ಜಾರಕಿಹೊಳಿ ಬಾಂಬೆಗೆ ಹೋಗಿಲ್ವಂತೆ, ಅವರು ಇಲ್ಲೇ ಇದ್ದಾರಂತೆ: ಹೀಗೆಂತ ಶಾಸಕ ಮಹೇಶ್ ಕುಮಟಳ್ಳಿ ಹೇಳ್ತಾರೆ

21/06/2021, 16:58

ರಾಹುಲ್ ಅಥಣಿ ಬೆಳಗಾವಿ
ಅಥಣಿ(reporterkarnataka news): ರಮೇಶ ಜಾರಕಿಹೊಳಿ ಅವರು ಬಾಂಬೆಗೆ ಹೋಗಿಲ್ಲ. ಅವರ ಕ್ಷೇತ್ರದಲ್ಲಿರುವವರು ಮಾಧ್ಯಮದಲ್ಲಿ ಊಹಾಪೋಹ ಸುದ್ದಿಗಳು ಬಿತ್ತರ ಮಾಡಲಾಗಿದೆ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯಿಸಿದ್ದಾರೆ.  

ಅವರು ಅಥಣಿ ಪಟ್ಟಣದಲ್ಲಿ ಸ್ವ ಗೃಹದಲ್ಲಿ ಮಾದ್ಯಮ ಜೊತೆ ಮಾತನಾಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಎಲ್ಲೂ ಹೊಗಿಲ್ಲ, ಅವರ ಕ್ಷೇತ್ರದಲ್ಲಿ ಇರುವರು, ಮತ್ತೆ ನಾನು ಬಾಂಬೆಗೆ ಹೋಗಿದ್ದೇನೆ ಎಂಬ ಸುದ್ದಿಗಳು ಬರುತ್ತಿದ್ದವು, ನಾನು ಕೂಡ ಅಥಣಿ ಕ್ಷೇತ್ರದಲ್ಲಿ ಇದ್ದೆನೆ, 15 ಜನ ಶಾಸಕರು ಅವರವರ ಕ್ಷೇತ್ರದಲ್ಲಿ ಇರಬಹುದು, ಅವರನ್ನು ನೀವು ಕೇಳಿ. ನಾನು ಮಾತ್ರ ಅಥಣಿಯಲ್ಲಿ ಇದ್ದೇನೆ ಎಂದರು.

17 ಜನ ಶಾಸಕರಿಂದ ಬಿಜೆಪಿ ಸರ್ಕಾರದಲ್ಲಿ ಗೊಂದಲವಾಗಿದೆ  ಎಂಬ ಸಚಿವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಪ್ರತಿಕ್ರಿಸಿದ ಕಮಟಳ್ಳಿ ,

 ಈಶ್ವರಪ್ಪನವರು ನಮ್ಮ ಹಿರಿಯರು, ನಮ್ಮನ್ನು ಅತಿ ಪ್ರೀತಿಯಿಂದ ಕಾಣುವರು. ಅವರ ಇಲಾಖೆಯಲ್ಲಿ ನಮ್ಮ ಕ್ಷೇತ್ರಕ್ಕೆ ಬೇಕಾದ ಕೆಲಸಗಳನ್ನು ಮುತುವರ್ಜಿಯಿಂದ ಮಾಡುತ್ತಾರೆ. ಆ ಅರ್ಥದಲ್ಲಿ ಅವರು ಮಾತನಾಡಿಲ್ಲ ಎಂದು ಹೇಳಿದರು.

ಸಿಎಂ ಬದಲಾವಣೆ ಪ್ರಶ್ನೆಯಿಲ್ಲ. ಸುಮ್ಮನೆ ವದಂತಿಗಳು ಹರಿದಾಡುತ್ತಿದೆ, ಮೊನ್ನೆ ರಾಜ್ಯ ಬಿಜೆಪಿ ಉಸ್ತುವಾರಿಯಾದ ಅರುಣ್ ಸಿಂಗ್ ಅವರು ಅದಕ್ಕೆಲ್ಲ ತೆರೆ ಎಳೆದಿದ್ದಾರೆ. ನಾನು ಸಿಎಂ ಪರವಾಗಿ ಇರುವನು. ನಮ್ಮ ಬೆಂಬಲ ಬಿಎಸವೈ ಎಂದು ಪ್ರತಿಕ್ರಿಯಿಸಿದರು.

ಸಚಿವ ಶ್ರೀಮಂತ ಪಾಟೀಲ್ ತಮ್ಮ ಇಲಾಖೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಯಾವುದೇ ಅದ್ಲು ಬದಲು ಆಗುವುದಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು