12:36 PM Friday1 - August 2025
ಬ್ರೇಕಿಂಗ್ ನ್ಯೂಸ್
ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಸ್ಪಾಟ್ ನಂಬರ್ 4ರ ಉತ್ಖನನ ಪ್ರಕ್ರಿಯೆ ಆರಂಭ ಬಾಲಮಂದಿರ, ಮಹಿಳಾ ನಿಲಯಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಚಿಣ್ಣರನ್ನು ಮುದ್ದಾಡಿದ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

01/08/2025, 12:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರಿದ್ದಾರೆ.

ತಾಲೂಕು ಕಚೇರಿಗೆ ನಿತ್ಯ ತಮ್ಮ ದೈನಂದಿನ ಕೆಲಸಗಳಿಗಾಗಿ ಬಂದಿರುವ ಜನಸಾಮಾನ್ಯರಿಗೆ ಓಡಾಡಲು ಕೂಡ ತೊಂದರೆಯಾಗುವ ರೀತಿಯಲ್ಲಿ ಕೆಲವು ಜನರು ವಾಹನ ತಂದು ಪಾರ್ಕಿಂಗ್‌ನಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಾರೆ. ತಾಲೂಕು ಕಚೇರಿ ಆವರಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಇತ್ತ ಶಿವಮೊಗ್ಗ, ಉಡುಪಿ, ಮಂಗಳೂರಿಗೆ ಬಸ್ ಹತ್ತಿ ಹೊಗುತ್ತಿರುವ ದೂರು ಕೇಳಿ ಬಂದಿದೆ. ಪಟ್ಟಣದ ರಸ್ತೆ ಅಕ್ಕ ಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದಂತೆ ತಾಲೂಕು ಕಚೇರಿ ಆವರಣದಲ್ಲಿ ಪಾರ್ಕಿಂಗ್ ಮಾಡಿ ಬೇರೆ ಕಡೆ ಹೋಗುತ್ತಾರೆ. ಇದರಿಂದ ತಾಲೂಕು ಕಚೇರಿಗೆ ಬರುವ ಇತರೆ ವಾಹನಗಳಿಗೆ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ ಎಂಬ ಮಾತು ಕೂಡ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಈ ರೀತಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಓರ್ವ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಾಲೂಕ ಕಚೇರಿ ಬಂದು ತಮ್ಮ ಕಚೇರಿಯ ಕೆಲಸ ಮುಗಿಸಿ ತಮ್ಮ ವಾಹನವನ್ನು ತೆಗೆಯಲಾಗದೆ ಗಂಟೆಗಟ್ಟಲೆ ಕಾದು ಕಾದು ನೊಂದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು