9:36 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ವಾಹನಗಳ ಅಡ್ಡಾದಿಡ್ಡಿ ಪಾರ್ಕಿಂಗ್ : ಜನಸಾಮಾನ್ಯರಿಗೆ ತೊಂದರೆ..! ಆಡಳಿತ ತಕ್ಷಣ ಎಚ್ಚೆತ್ತುಕೊಳ್ಳಲಿ

01/08/2025, 12:29

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕು ಕಚೇರಿ ಆವರಣದಲ್ಲಿ ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ತಾಲೂಕು ಕಚೇರಿಗೆ ಬರುವ ಜನಸಾಮಾನ್ಯರಿಗೆ ಮತ್ತು ವಾಹನಗಳಿಗೆ ತೊಂದರೆಯಾಗುತ್ತಿದೆ ಎಂದು ಅನೇಕ ಸಾರ್ವಜನಿಕರು ದೂರಿದ್ದಾರೆ.

ತಾಲೂಕು ಕಚೇರಿಗೆ ನಿತ್ಯ ತಮ್ಮ ದೈನಂದಿನ ಕೆಲಸಗಳಿಗಾಗಿ ಬಂದಿರುವ ಜನಸಾಮಾನ್ಯರಿಗೆ ಓಡಾಡಲು ಕೂಡ ತೊಂದರೆಯಾಗುವ ರೀತಿಯಲ್ಲಿ ಕೆಲವು ಜನರು ವಾಹನ ತಂದು ಪಾರ್ಕಿಂಗ್‌ನಲ್ಲಿ ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಾರೆ. ತಾಲೂಕು ಕಚೇರಿ ಆವರಣದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಇತ್ತ ಶಿವಮೊಗ್ಗ, ಉಡುಪಿ, ಮಂಗಳೂರಿಗೆ ಬಸ್ ಹತ್ತಿ ಹೊಗುತ್ತಿರುವ ದೂರು ಕೇಳಿ ಬಂದಿದೆ. ಪಟ್ಟಣದ ರಸ್ತೆ ಅಕ್ಕ ಪಕ್ಕ ವಾಹನಗಳನ್ನು ಪಾರ್ಕಿಂಗ್ ಮಾಡಿದಂತೆ ತಾಲೂಕು ಕಚೇರಿ ಆವರಣದಲ್ಲಿ ಪಾರ್ಕಿಂಗ್ ಮಾಡಿ ಬೇರೆ ಕಡೆ ಹೋಗುತ್ತಾರೆ. ಇದರಿಂದ ತಾಲೂಕು ಕಚೇರಿಗೆ ಬರುವ ಇತರೆ ವಾಹನಗಳಿಗೆ ತೊಂದರೆಯಾಗುತ್ತಿದೆ.
ಪೊಲೀಸರು ಕೂಡ ಅಡ್ಡಾದಿಡ್ಡಿ ವಾಹನ ನಿಲ್ಲಿಸುವವರಿಗೆ ದಂಡದ ಬಿಸಿ ಮುಟ್ಟಿಸಬೇಕಿದೆ ಎಂಬ ಮಾತು ಕೂಡ ಸಾರ್ವಜನಿಕರಿಂದ ಕೇಳಿಬರುತ್ತಿದೆ.
ಈ ರೀತಿ ಅಡ್ಡಾದಿಡ್ಡಿ ನಿಲ್ಲಿಸುವ ವಾಹನಗಳಿಂದ ಪ್ರತಿನಿತ್ಯವೂ ಟ್ರಾಫಿಕ್ ಜಾಮ್ ಆಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ವಾಹನಗಳ ಪಾರ್ಕಿಂಗ್ ಬಗ್ಗೆ ತಾಲೂಕು ಆಡಳಿತ ಗಮನ ಹರಿಸಿ ಓರ್ವ ಸೆಕ್ಯೂರಿಟಿ ಗಾರ್ಡ್ ನೇಮಿಸುವಂತೆ ತಾಲೂಕ ಕಚೇರಿ ಬಂದು ತಮ್ಮ ಕಚೇರಿಯ ಕೆಲಸ ಮುಗಿಸಿ ತಮ್ಮ ವಾಹನವನ್ನು ತೆಗೆಯಲಾಗದೆ ಗಂಟೆಗಟ್ಟಲೆ ಕಾದು ಕಾದು ನೊಂದ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು