10:25 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ

16/07/2024, 18:08

ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, ‘ಗುಡ್ಡೆದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು.
ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 92ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದರು.
ಸಿನಿಮಾ ಮಾತ್ರವಲ್ಲದೆ ಕನ್ನಡ ಮತ್ತು ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ಅವರು ನಿರ್ದೇಶಿಸಿದ್ದರು. ಗುಡ್ಡೆದ ಭೂತದ ಅವರ ಜನಪ್ರಿಯ ಟಿವಿ ಧಾರಾವಾಹಿ. 80ರ ದಶಕದಲ್ಲಿ ದೂರದರ್ಶನ ಚಂದನದಲ್ಲಿ ಪ್ರಸಾರವಾಗುತ್ತಿತ್ತು. ಖ್ಯಾತ ನಟ ಪ್ರಕಾಶ್ ರೈ ಇದರಲ್ಲಿ ಅಭಿನಯಿಸಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಕುರಿತು ಸಾಕ್ಷ್ಯಚಿತ್ರವನ್ನು ಸದಾನಂದ ಸುವರ್ಣರು ನಿರ್ದೇಶಿಸಿದ್ದರು.
ಸದಾನಂದ ಸುವರ್ಣ ಅವರು ಓರ್ವ ಪ್ರಯೋಗಶೀಲ ನಿರ್ದೇಶಕರಾಗಿದ್ದರು. ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ನಂತರ ಮಂಗಳೂರಿನ ರಂಗಭೂಮಿಗೆ ಬಂದು ರಂಗಭೂಮಿಯಲ್ಲಿ ಹೊಸ ಛಾಪನ್ನು ಒತ್ತಿದವರು. ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದರು.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪ ಸಂಪಾದಕರಾಗಿದ್ದ ದಿ. ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ಅವರು ಸದಾನಂದ ಸುವರ್ಣರ ರಂಗ ಸಾಧನೆಯ ಕುರಿತೇ “ರಂಗ ಜಂಗಮ ಸದಾನಂದ ಸುವರ್ಣ” ಅನ್ನುವ ಸಂಶೋಧನಾ ಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು