7:32 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ

16/07/2024, 18:08

ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, ‘ಗುಡ್ಡೆದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು.
ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 92ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದರು.
ಸಿನಿಮಾ ಮಾತ್ರವಲ್ಲದೆ ಕನ್ನಡ ಮತ್ತು ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ಅವರು ನಿರ್ದೇಶಿಸಿದ್ದರು. ಗುಡ್ಡೆದ ಭೂತದ ಅವರ ಜನಪ್ರಿಯ ಟಿವಿ ಧಾರಾವಾಹಿ. 80ರ ದಶಕದಲ್ಲಿ ದೂರದರ್ಶನ ಚಂದನದಲ್ಲಿ ಪ್ರಸಾರವಾಗುತ್ತಿತ್ತು. ಖ್ಯಾತ ನಟ ಪ್ರಕಾಶ್ ರೈ ಇದರಲ್ಲಿ ಅಭಿನಯಿಸಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಕುರಿತು ಸಾಕ್ಷ್ಯಚಿತ್ರವನ್ನು ಸದಾನಂದ ಸುವರ್ಣರು ನಿರ್ದೇಶಿಸಿದ್ದರು.
ಸದಾನಂದ ಸುವರ್ಣ ಅವರು ಓರ್ವ ಪ್ರಯೋಗಶೀಲ ನಿರ್ದೇಶಕರಾಗಿದ್ದರು. ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ನಂತರ ಮಂಗಳೂರಿನ ರಂಗಭೂಮಿಗೆ ಬಂದು ರಂಗಭೂಮಿಯಲ್ಲಿ ಹೊಸ ಛಾಪನ್ನು ಒತ್ತಿದವರು. ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದರು.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪ ಸಂಪಾದಕರಾಗಿದ್ದ ದಿ. ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ಅವರು ಸದಾನಂದ ಸುವರ್ಣರ ರಂಗ ಸಾಧನೆಯ ಕುರಿತೇ “ರಂಗ ಜಂಗಮ ಸದಾನಂದ ಸುವರ್ಣ” ಅನ್ನುವ ಸಂಶೋಧನಾ ಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು