5:23 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ

16/07/2024, 18:08

ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, ‘ಗುಡ್ಡೆದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು.
ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 92ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದರು.
ಸಿನಿಮಾ ಮಾತ್ರವಲ್ಲದೆ ಕನ್ನಡ ಮತ್ತು ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ಅವರು ನಿರ್ದೇಶಿಸಿದ್ದರು. ಗುಡ್ಡೆದ ಭೂತದ ಅವರ ಜನಪ್ರಿಯ ಟಿವಿ ಧಾರಾವಾಹಿ. 80ರ ದಶಕದಲ್ಲಿ ದೂರದರ್ಶನ ಚಂದನದಲ್ಲಿ ಪ್ರಸಾರವಾಗುತ್ತಿತ್ತು. ಖ್ಯಾತ ನಟ ಪ್ರಕಾಶ್ ರೈ ಇದರಲ್ಲಿ ಅಭಿನಯಿಸಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಕುರಿತು ಸಾಕ್ಷ್ಯಚಿತ್ರವನ್ನು ಸದಾನಂದ ಸುವರ್ಣರು ನಿರ್ದೇಶಿಸಿದ್ದರು.
ಸದಾನಂದ ಸುವರ್ಣ ಅವರು ಓರ್ವ ಪ್ರಯೋಗಶೀಲ ನಿರ್ದೇಶಕರಾಗಿದ್ದರು. ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ನಂತರ ಮಂಗಳೂರಿನ ರಂಗಭೂಮಿಗೆ ಬಂದು ರಂಗಭೂಮಿಯಲ್ಲಿ ಹೊಸ ಛಾಪನ್ನು ಒತ್ತಿದವರು. ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದರು.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪ ಸಂಪಾದಕರಾಗಿದ್ದ ದಿ. ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ಅವರು ಸದಾನಂದ ಸುವರ್ಣರ ರಂಗ ಸಾಧನೆಯ ಕುರಿತೇ “ರಂಗ ಜಂಗಮ ಸದಾನಂದ ಸುವರ್ಣ” ಅನ್ನುವ ಸಂಶೋಧನಾ ಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು