7:49 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಂಗ ಸ್ವರೂಪದಿಂದ ಬೇಸಿಗೆ ಶಿಬಿರ ಸಂಪನ್ನ ; ರಂಗಸ್ವರೂಪ ಪ್ರಶಸ್ತಿ ಪ್ರದಾನ

22/04/2025, 11:20

ಮಂಗಳೂರು(reporter Karnataka.com)

ರಂಗ ಸ್ವರೂಪದ 20ನೇ ವರ್ಷದ 4ದಿನಗಳ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಹಾಗೂ ರಂಗಸ್ವರೂಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮರಕಡ ಕುಂಜತ್ತಬೈಲ್ ಸರ್ಕಾರಿ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.

ದ.ಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗೋವಿಂದ ಮಡಿವಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈಗಿನ ಕಾಲದಲ್ಲಿ ಪುಟಾಣಿ ಮಕ್ಕಳಿಗೆ ಬೋಧನೆ ಮಾಡುವುದು ಒಂದು ಚಾಲೆಂಜ್ ಅಗಿದೆ‌. ದ.ಕ. ಜಿಲ್ಲೆಯಲ್ಲಿ 1772 ಶಾಲೆಗಳಿವೆ. ರಂಗ ಸ್ವರೂಪ ಸಂಸ್ಥೆಯೊಂದಿಗೆ ಕೈಜೋಡಿಸಿ ಮರಕಡ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ಇತರ ಶಾಲೆಗಳಿಗೆ ಮಾದರಿಯಾಗಿದೆ‌ ಎಂದರು.

ಈ ಸಂದರ್ಭ ಜಾನಪದ ವಿದ್ವಾಂಸ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ಕೆ ಪೇಜಾವರ್ ಅವರಿಗೆ ರಂಗಸ್ವರೂಪ-2025 ಪ್ರಶಸ್ತಿ ‌ಪ್ರದಾನ ಮಾಡಲಾಯಿತು.
ಬಳಿಕ ಮಾತನಾಡಿದ ಅವರು ಈ ಶಿಬಿರ ನಿತ್ಯ ಶಿಬಿರವಾಗಬೇಕು ಮಕ್ಕಳು ನಿತ್ಯ ಸಂಭ್ರಮಿಸಬೇಕು ನಿತ್ಯ ಸಂಭ್ರಮಿಸಿದಾಗ ಶಿಕ್ಷಣಕ್ಕೆ ಹೆಚ್ಚು ಒತ್ತು ಬರುತ್ತದೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ರವರನ್ನು ಸನ್ಮಾನಿಸಲಾಯಿತು. ರಂಗ ಸ್ವರೂಪ ಗೌರವ ಸಲಹೆಗಾರ ಎನ್‌. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಕಾರ್ಪೊರೇಟರ್ ಶರತ್ ಕುಮಾರ್,‌ ಮರಕಡ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಎ.ನೇತ್ರಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು‌.

ರಂಗ ಸ್ವರೂಪ ಅಧ್ಯಕ್ಷ ರೆಹಮಾನ್ ಖಾನ್ ಕುಂಜತ್ತಬೈಲ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಬಿರ ನಿರ್ದೇಶಕ ಝುಬೇರ್ ಖಾನ್‌ ಕುಡ್ಲ ಸ್ವಾಗತಿಸಿದರು. ಸದಸ್ಯರಾದ ತಸ್ಲೀಮಾ ಬಾನು,ಅನೀಸಾ ಸವಾದ್ ಪ್ರಶಸ್ತಿ ಪತ್ರ ವಾಚಿಸಿದರು, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ವಂದಿಸಿದರು.
ಗೌರವಾಧ್ಯಕ್ಷ ಪ್ರೇಂನಾಥ್ ಮರ್ಣೆ ನಿರೂಪಿಸಿದರು.
ಶಿಬಿರಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು