11:38 PM Thursday27 - November 2025
ಬ್ರೇಕಿಂಗ್ ನ್ಯೂಸ್
ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ…

ಇತ್ತೀಚಿನ ಸುದ್ದಿ

ರಂಗ ಸ್ವರೂಪದಿಂದ ಬೇಸಿಗೆ ಶಿಬಿರ ಸಂಪನ್ನ ; ರಂಗಸ್ವರೂಪ ಪ್ರಶಸ್ತಿ ಪ್ರದಾನ

22/04/2025, 11:20

ಮಂಗಳೂರು(reporter Karnataka.com)

ರಂಗ ಸ್ವರೂಪದ 20ನೇ ವರ್ಷದ 4ದಿನಗಳ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಹಾಗೂ ರಂಗಸ್ವರೂಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮರಕಡ ಕುಂಜತ್ತಬೈಲ್ ಸರ್ಕಾರಿ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.

ದ.ಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗೋವಿಂದ ಮಡಿವಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈಗಿನ ಕಾಲದಲ್ಲಿ ಪುಟಾಣಿ ಮಕ್ಕಳಿಗೆ ಬೋಧನೆ ಮಾಡುವುದು ಒಂದು ಚಾಲೆಂಜ್ ಅಗಿದೆ‌. ದ.ಕ. ಜಿಲ್ಲೆಯಲ್ಲಿ 1772 ಶಾಲೆಗಳಿವೆ. ರಂಗ ಸ್ವರೂಪ ಸಂಸ್ಥೆಯೊಂದಿಗೆ ಕೈಜೋಡಿಸಿ ಮರಕಡ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ಇತರ ಶಾಲೆಗಳಿಗೆ ಮಾದರಿಯಾಗಿದೆ‌ ಎಂದರು.

ಈ ಸಂದರ್ಭ ಜಾನಪದ ವಿದ್ವಾಂಸ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ಕೆ ಪೇಜಾವರ್ ಅವರಿಗೆ ರಂಗಸ್ವರೂಪ-2025 ಪ್ರಶಸ್ತಿ ‌ಪ್ರದಾನ ಮಾಡಲಾಯಿತು.
ಬಳಿಕ ಮಾತನಾಡಿದ ಅವರು ಈ ಶಿಬಿರ ನಿತ್ಯ ಶಿಬಿರವಾಗಬೇಕು ಮಕ್ಕಳು ನಿತ್ಯ ಸಂಭ್ರಮಿಸಬೇಕು ನಿತ್ಯ ಸಂಭ್ರಮಿಸಿದಾಗ ಶಿಕ್ಷಣಕ್ಕೆ ಹೆಚ್ಚು ಒತ್ತು ಬರುತ್ತದೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ರವರನ್ನು ಸನ್ಮಾನಿಸಲಾಯಿತು. ರಂಗ ಸ್ವರೂಪ ಗೌರವ ಸಲಹೆಗಾರ ಎನ್‌. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಕಾರ್ಪೊರೇಟರ್ ಶರತ್ ಕುಮಾರ್,‌ ಮರಕಡ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಎ.ನೇತ್ರಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು‌.

ರಂಗ ಸ್ವರೂಪ ಅಧ್ಯಕ್ಷ ರೆಹಮಾನ್ ಖಾನ್ ಕುಂಜತ್ತಬೈಲ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಬಿರ ನಿರ್ದೇಶಕ ಝುಬೇರ್ ಖಾನ್‌ ಕುಡ್ಲ ಸ್ವಾಗತಿಸಿದರು. ಸದಸ್ಯರಾದ ತಸ್ಲೀಮಾ ಬಾನು,ಅನೀಸಾ ಸವಾದ್ ಪ್ರಶಸ್ತಿ ಪತ್ರ ವಾಚಿಸಿದರು, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ವಂದಿಸಿದರು.
ಗೌರವಾಧ್ಯಕ್ಷ ಪ್ರೇಂನಾಥ್ ಮರ್ಣೆ ನಿರೂಪಿಸಿದರು.
ಶಿಬಿರಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು