12:30 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ರಂಗ ಸ್ವರೂಪದಿಂದ ಬೇಸಿಗೆ ಶಿಬಿರ ಸಂಪನ್ನ ; ರಂಗಸ್ವರೂಪ ಪ್ರಶಸ್ತಿ ಪ್ರದಾನ

22/04/2025, 11:20

ಮಂಗಳೂರು(reporter Karnataka.com)

ರಂಗ ಸ್ವರೂಪದ 20ನೇ ವರ್ಷದ 4ದಿನಗಳ ಮಕ್ಕಳ ಬೇಸಿಗೆ ಶಿಬಿರ ಸಮಾರೋಪ ಹಾಗೂ ರಂಗಸ್ವರೂಪ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮರಕಡ ಕುಂಜತ್ತಬೈಲ್ ಸರ್ಕಾರಿ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.

ದ.ಕ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಗೋವಿಂದ ಮಡಿವಾಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈಗಿನ ಕಾಲದಲ್ಲಿ ಪುಟಾಣಿ ಮಕ್ಕಳಿಗೆ ಬೋಧನೆ ಮಾಡುವುದು ಒಂದು ಚಾಲೆಂಜ್ ಅಗಿದೆ‌. ದ.ಕ. ಜಿಲ್ಲೆಯಲ್ಲಿ 1772 ಶಾಲೆಗಳಿವೆ. ರಂಗ ಸ್ವರೂಪ ಸಂಸ್ಥೆಯೊಂದಿಗೆ ಕೈಜೋಡಿಸಿ ಮರಕಡ ಶಾಲೆ ಆಯೋಜಿಸಿದ ಬೇಸಿಗೆ ಶಿಬಿರ ಇತರ ಶಾಲೆಗಳಿಗೆ ಮಾದರಿಯಾಗಿದೆ‌ ಎಂದರು.

ಈ ಸಂದರ್ಭ ಜಾನಪದ ವಿದ್ವಾಂಸ, ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ಕೆ ಪೇಜಾವರ್ ಅವರಿಗೆ ರಂಗಸ್ವರೂಪ-2025 ಪ್ರಶಸ್ತಿ ‌ಪ್ರದಾನ ಮಾಡಲಾಯಿತು.
ಬಳಿಕ ಮಾತನಾಡಿದ ಅವರು ಈ ಶಿಬಿರ ನಿತ್ಯ ಶಿಬಿರವಾಗಬೇಕು ಮಕ್ಕಳು ನಿತ್ಯ ಸಂಭ್ರಮಿಸಬೇಕು ನಿತ್ಯ ಸಂಭ್ರಮಿಸಿದಾಗ ಶಿಕ್ಷಣಕ್ಕೆ ಹೆಚ್ಚು ಒತ್ತು ಬರುತ್ತದೆ ಎಂದು ಹೇಳಿದರು.
ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ರವರನ್ನು ಸನ್ಮಾನಿಸಲಾಯಿತು. ರಂಗ ಸ್ವರೂಪ ಗೌರವ ಸಲಹೆಗಾರ ಎನ್‌. ಶಿವಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಕಾರ್ಪೊರೇಟರ್ ಶರತ್ ಕುಮಾರ್,‌ ಮರಕಡ ಸರಕಾರಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಾದ ಎ.ನೇತ್ರಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು‌.

ರಂಗ ಸ್ವರೂಪ ಅಧ್ಯಕ್ಷ ರೆಹಮಾನ್ ಖಾನ್ ಕುಂಜತ್ತಬೈಲ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಶಿಬಿರ ನಿರ್ದೇಶಕ ಝುಬೇರ್ ಖಾನ್‌ ಕುಡ್ಲ ಸ್ವಾಗತಿಸಿದರು. ಸದಸ್ಯರಾದ ತಸ್ಲೀಮಾ ಬಾನು,ಅನೀಸಾ ಸವಾದ್ ಪ್ರಶಸ್ತಿ ಪತ್ರ ವಾಚಿಸಿದರು, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ವಂದಿಸಿದರು.
ಗೌರವಾಧ್ಯಕ್ಷ ಪ್ರೇಂನಾಥ್ ಮರ್ಣೆ ನಿರೂಪಿಸಿದರು.
ಶಿಬಿರಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು