5:20 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ

29/01/2026, 12:14

ಬೆಂಗಳೂರು(reporterkarnataka.com): ಭಾರತದ ಪ್ರಮುಖ ಏರೋಸ್ಪೇಸ್ ಕಂಪನಿಗಳಲ್ಲಿ ಒಂದಾದ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್ ಮತ್ತು ಪ್ರಮುಖ ಬ್ಯಾಟರಿ ತಯಾರಕರಾದ ಎಕ್ಸೈಡ್ ಎನರ್ಜಿ ಕಂಪನಿಯು ಜಿಟಿಟಿಸಿಯಲ್ಲಿ ತರಬೇತಿ ಪಡೆದಿರುವ 600ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿದೆ.


ಈ ಕುರಿತು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್* ಅವರ ಸಮ್ಮುಖದಲ್ಲಿ ರಾಜಾಜಿನಗರ ಜಿಟಿಟಿಸಿ ಕ್ಯಾಂಪಸ್‌ನಲ್ಲಿ
ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಟ್ಯೂಬ್‌ಗಳು ಮತ್ತು ನಾಳಗಳು, ಉಪಗ್ರಹ ಸಂವಹನ ವ್ಯವಸ್ಥೆಗಳು, ಉಷ್ಣ ನಿರ್ವಹಣಾ ಪರಿಹಾರಗಳು, AI-ಚಾಲಿತ ಸಾಫ್ಟ್‌ವೇರ್ ಮತ್ತು ರಕ್ಷಣಾ ಮತ್ತು ಏರೋಸ್ಪೇಸ್‌ಗಾಗಿ ಎಂಬೆಡೆಡ್ ಸಿಸ್ಟಮ್‌ಗಳನ್ನು ತಯಾರಿಸುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್‌, ಈಗ ಜಿಟಿಟಿಸಿ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳುತ್ತಿದೆ ಎಂದು ಮಾನವ ಸಂಪನ್ಮೂಲ ಅಧಿಕಾರಿ ಸಂದೇಶ್‌ ಪಿ ಸತೀಶ್‌ ತಿಳಿಸಿದ್ದಾರೆ.
“ವೆಲ್ಡಿಂಗ್, ಸಿಎನ್‌ಸಿ, ಸೆಟ್ಟಿಂಗ್ ಮತ್ತು ಪ್ರೋಗ್ರಾಮಿಂಗ್, ಲೇಸರ್ ಕಟಿಂಗ್, ಫಿಟ್ಟಿಂಗ್, ಶೀಟ್ ಮೆಟಲ್, ಟೂಲಿಂಗ್ ಮತ್ತು ವಿನ್ಯಾಸ ಎಂಜಿನಿಯರಿಂಗ್, ಗುಣಮಟ್ಟ ನಿಯಂತ್ರಣ ಮತ್ತು ಪರೀಕ್ಷೆ ಸೇರಿದಂತೆ 35 ವಿಭಾಗಗಳಲ್ಲಿ ಸುಮಾರು 200 ವೃತ್ತಿಪರರನ್ನು ನೇಮಿಸಿಕೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಎಲ್ಲಾ ಕೌಶಲ್ಯಗಳಲ್ಲಿ ಇನ್ನೂ ಹೆಚ್ಚಿನ ತರಬೇತಿ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.
ಎಕ್ಸೈಡ್ ಎನರ್ಜಿಯ ಉತ್ಪಾದನಾ ಎಂಜಿನಿಯರಿಂಗ್ ಮುಖ್ಯಸ್ಥ ಸುಭಾಷ್ ಶ್ರೀನಿವಾಸ್ ಮಾತನಾಡಿ, ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಸ್ಟ್ರೀಮ್‌ಗಳಲ್ಲಿ ತರಬೇತಿ ಪಡೆದಿರುವವರನ್ನು ನೇಮಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಯುಕೆ ಮೂಲದ ಎನ್‌ಪಿಟಿಸಿ ಗ್ರೂಪ್ ಆಫ್ ಕಾಲೇಜುಗಳ ಮುಖ್ಯಸ್ಥ ಗಗನ್ ಅಗರ್ವಾಲ್ ಮಾತನಾಡಿ, ಜಿಟಿಟಿಸಿ ಜೊತೆ ಸಹಿ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಜಾಗತಿಕ ಕೌಶಲ್ಯ, ಅಧ್ಯಾಪಕರ ಕೌಶಲ್ಯವರ್ಧನೆ ಮತ್ತು ಉದ್ಯಮ-ಸಿದ್ಧ ತರಬೇತಿಯ ಮೇಲೆ ಹೆಚ್ಚಿನ ಗಮನಹರಿಸುವ ಗುರಿ ಹೊಂದಲಾಗಿದೆ ಎಂದರು.

*ಹಳೆಯ ವಿದ್ಯಾರ್ಥಿಗಳ ಸಮ್ಮಿಲನ:*
ಇದೇ ಸಂದರ್ಭದಲ್ಲಿ ದೇಶಾದ್ಯಂತ ಮತ್ತು ವಿದೇಶಗಳಲ್ಲಿ ಕೆಲಸ ಮಾಡುತ್ತಿರುವ ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಕೂಡ ನಡೆಯಿತು.
ಜಿಟಿಟಿಸಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ವಿ. ಸುದರ್ಶನ ಮಾತನಾಡಿ, ನಾವೀನ್ಯತೆ, ಉದ್ಯಮಶೀಲತೆ, ಉದ್ಯಮ ಸಹಯೋಗ ಮತ್ತು ಪಠ್ಯಕ್ರಮ ಅಭಿವೃದ್ಧಿ ಜೊತೆಗೆ ಉತ್ತಮ ಮಾರ್ಗದರ್ಶನ, ತರಬೇತಿ ಪಡೆದಿದ್ದರಿಂದ ಉದ್ಯೋಗಾವಕಾಶಗಳು ದೊರೆಯಿತು ಎಂದರು.
ಇದೇ ವೇಳೆ 1972 ರಲ್ಲಿ ಜಿಟಿಟಿಸಿಗೆ ಪ್ರವೇಶ ಪಡೆದ ಮೊದಲ ವಿದ್ಯಾರ್ಥಿ ಮೋಹನ್ ಅವರನ್ನು ಸನ್ಮಾನಿಸಲಾಯಿತು.
ಶಾಸಕ ಪ್ರಿಯಾ ಕೃಷ್ಣ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಇ.ವಿ. ರಮಣ ರೆಡ್ಡಿ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಮತ್ತು ಜಿಟಿಟಿಸಿ ವ್ಯವಸ್ಥಾಪಕ ನಿರ್ದೇಶಕ ಸಿದ್ದಲಿಂಗಪ್ಪ ಬಿ. ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು