12:21 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ಗೆ ರಾಣಿ ಅಬ್ಬಕ್ಕ ಪ್ರಶಸ್ತಿ: ಜ.18ರಂದು ಪ್ರದಾನ

14/01/2026, 22:28

ಮಂಗಳೂರು(reporterkarnataka.com): ತುಳುನಾಡಿನ ಅಪ್ರತಿಮ ಹೋರಾಟಗಾರ್ತಿ ಚೌಟ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ವರ್ಷಾಚರಣೆ ಪ್ರಯುಕ್ತ ಜವನೆರ್ ಬೆದ್ರ ತಂಡ ನೀಡುವ ರಾಣಿ ಅಬ್ಬಕ್ಕ ಪ್ರಶಸ್ತಿಗೆ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಪದ್ಮಶ್ರೀ ಭಟ್ ನಿಡ್ಡೋಡಿ ಅವರು ಆಯ್ಕೆಯಾಗಿದ್ದಾರೆ.
ಜನವರಿ 18ರಂದು ಮಧ್ಯಾಹ್ನ 3.45ಕ್ಕೆ ಚೌಟ ರಾಣಿ ಅಬ್ಬಕ್ಕ ಪ್ರೇರಣಾ ಪತ್ರ ನೀಡಿ ಅವರನ್ನು ಗೌರವಿಸಲಾಗುವುದು.
ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು.

ಇತ್ತೀಚಿನ ಸುದ್ದಿ

ಜಾಹೀರಾತು