8:46 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು

16/02/2026, 19:15

ಗಂಗಾವತಿ(reporterkarnataka.com): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದ್ದ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಹಾಗೂ ದೇಶಿ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಂದು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳಿಗೆ ಮರಣದಂಡನೆ ವಿಧಿಸಲಾಗಿದೆ. ಕೆಳ ಹಂತದ ನ್ಯಾಯಾಲಯದ ಐತಿಹಾಸಿಕ ತೀರ್ಪು ಇದಾಗಿದೆ.
ಪ್ರಕರಣದ ಆರೋಪಿಗಳಾದ ಗಂಗಾವತಿ ಸಾಯಿನಗರದ ನಿವಾಸಿಗಳಾದ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಹಾಗೂ ಶರಣಪ್ಪ ಎಂಬ ಮೂವರು ಆರೋಪಿಗಳು ಪ್ರಕರಣದಲ್ಲಿ ದೋಷಿಗಳೆಂದು ಈಗಾಗಲೇ ನ್ಯಾಯಾಲಯ ತೀರ್ಮಾನಿಸಿತ್ತು. ಇಂದು ಶಿಕ್ಷೆಯ ಪ್ರಮಾಣ ಘೋಷಣೆ ಮಾಡಿದ ನ್ಯಾಯಧೀಶ ಸದಾನಂದ ನಾಗಪ್ಪ ನಾಯಕ್ ಅವರು ಮೂವರಿಗೂ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

*ಆ ದಿನ ಏನಾಗಿತ್ತು?:*
ಹಂಪಿ ಸಮೀಪದ ಸಾಣಾಪುರದ ತುಂಗಭದ್ರಾ ಎಡದಂಡೆ ಕಾಲುವೆ ಬಳಿ 2025ರ ಮಾರ್ಚ್ 6ರಂದು ಘಟನೆ ನಡೆದಿತ್ತು. ವಿದೇಶಿ ಮಹಿಳೆ, ಅಮೆರಿಕದ ಪ್ರವಾಸಿಗನ ಕೊಲೆ ನಡೆದಿತ್ತು. ಅನೇಕುಂದಿ ಪ್ರದೇಶದ ಹೋಮ್‌ಸ್ಟೇನಲ್ಲಿ ತಂಗಿದ್ದ 5 ಮಂದಿ ಪ್ರವಾಸಿಗರು ಊಟದ ನಂತರ ಕಾಲುವೆ ಬಳಿ ಮ್ಯೂಸಿಕ್ ಕೇಳುತ್ತ ಕುಳಿತಿದ್ದರು. ಈ ವೇಳೆ ಮದ್ಯಪಾನ ಮಾಡಿ ಬಂದಿದ್ದ ಮೂವರು ಆರೋಪಿಗಳು ಈ ಕೃತ್ಯ ಎಸಗಿದ್ದರು. ಮಾತ್ರವಲ್ಲ ಗುಂಪಿನಲ್ಲಿದ್ದ ಮೂವರು ಪುರುಷ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ ಅವರನ್ನು ಕಾಲುವೆಗೆ ತಳ್ಳಿ ಇಬ್ಬರು ಮಹಿಳಾ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಸಂತ್ರಸ್ತ ಮಹಿಳೆಯರಲ್ಲಿ ಒಬ್ಬರು ಇಸ್ರೇಲ್ ಪ್ರಜೆಯಾಗಿದ್ದರೆ, ಮತ್ತೊಬ್ಬರು ಭಾರತೀಯ ಮಹಿಳೆಯಾಗಿದ್ದರು. ಇನ್ನು ಆರೋಪಿಗಳು ನಡೆಸಿದ ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಒಡಿಶಾ ಮೂಲದ ಬಿಭಾಷಾ ಎಂಬ ಯುವಕ ಈಜಲು ಆಗದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ. ಮೃತದೇಹವನ್ನು ಸುಮಾರು 24 ಗಂಟೆಗಳ ನಂತರ ಪತ್ತೆ ಹಚ್ಚಲಾಗಿತ್ತು. ಇತರ ಇಬ್ಬರು ಪ್ರವಾಸಿಗರು ಈಜಿ ದಡ ಸೇರಿ, ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಪ್ರಕರಣವು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು.
ಘಟನೆಯ ಬಳಿಕ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೂವರು ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ವೇಗವಾಗಿ ನಡೆಸಿದ ಪೊಲೀಸರು ಸಮಗ್ರ ಸಾಕ್ಷ್ಯಾಧಾರಗಳೊಂದಿಗೆ ಆರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ಆರೋಪಗಳೆಲ್ಲವೂ ಸಾಬೀತಾಗಿವೆ ಎಂದು ಕಂಡುಬಂದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಲಾಗಿತ್ತು.
ಇಂದು ಅಂತಿಮ ತೀರ್ಪು ಪ್ರಕಟಿಸಿದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಪ್ರಕರಣ ನಡೆದು ಕೇವಲ 9 ತಿಂಗಳೊಳಗೆ ತೀರ್ಪು ನೀಡುವ ಮೂಲಕ ನ್ಯಾಯಾಂಗದ ದಕ್ಷತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ನ್ಯಾಯಮೂರ್ತಿ ಸದಾನಂದ ನಾಗಪ್ಪ ನಾಯಕ್ ಅವರು ತೀರ್ಪು ಪ್ರಕಟಿಸಿ, ಇಂತಹ ಕ್ರೂರ ಅಪರಾಧಗಳಿಗೆ ಸಮಾಜದಲ್ಲಿ ಯಾವುದೇ ಸ್ಥಳವಿಲ್ಲ ಎಂಬ ಬಲವಾದ ಸಂದೇಶವನ್ನು ನೀಡಿದರು. ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ಹಾಗೂ ನಿರಪರಾಧಿ ಯುವಕನ ಕೊಲೆ ಪ್ರಕರಣದಲ್ಲಿ ನ್ಯಾಯ ದೊರೆತಿದೆ ಎಂಬ ಭಾವನೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು