3:29 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ 

23/05/2022, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳಿಗೆ ಸೋಮವಾರ ಕೃಷಿ ಅಧಿಕಾರಿ ವೆಂಕಟೇಶ್ ಎಂ.ಆರ್. ಅವರು ದಿಢೀರ್ ದಾಳಿ ನಡೆಸಿ ರಸಗೊಬ್ಬರ ದಾಸ್ತಾನು, ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. 

ವಿವಿಧ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿಗಳನ್ನು  ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಯಿತು ಹಾಗೂ ನಿಯಮ ಪಾಲಿಸದ ರಸಗೊಬ್ಬರ ಮಾರಾಟಗಾರರಿಗೆ ನೋಟಿಸನ್ನು ನೀಡಿ ಮತ್ತೊಮ್ಮೆ ನಿಯಮ ಉಲ್ಲಂಘನೆ ಕಂಡು ಬಂದರೆ ಅಧಿಕೃತ ಪರವಾನಗಿಯನ್ನು ರದ್ದು ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ತಾಲೂಕಿನಲ್ಲಿ ಮುಂಗಾರು ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ರಸಗೊಬ್ಬರಗಳ ದಾಸ್ತಾನು ಇದೆ 


ಕಡಿಮೆ ಇರುವ ರಸಗೊಬ್ಬರಗಳನ್ನು ದಾಸ್ತಾನು ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ರೈತರು ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಬೇಕು ಹಾಗೂ ರಸಗೊಬ್ಬರ ಮಾರಾಟ ಗಾರರು ಎಂಆರ್ಪಿ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ರಸಗೊಬ್ಬರವನ್ನು ರೈತರಿಗೆ ವಿತರಿಸುವಾಗ  ಪಿಓಎಸ್ ಮಿಷಿನ ಮುಖಾಂತರ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ಪ್ರದೀಪ್ ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು