1:26 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಸಗೊಬ್ಬರ ಹಾಗೂ ಕೀಟನಾಶಕ ಅಂಗಡಿಗಳ ಮೇಲೆ ಕೃಷಿ ಅಧಿಕಾರಿಗಳ ದಿಢೀರ್ ದಾಳಿ 

23/05/2022, 17:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ವಿವಿಧ ರಸಗೊಬ್ಬರ ಹಾಗೂ ಕೀಟನಾಶಕ ಮಳಿಗೆಗಳಿಗೆ ಸೋಮವಾರ ಕೃಷಿ ಅಧಿಕಾರಿ ವೆಂಕಟೇಶ್ ಎಂ.ಆರ್. ಅವರು ದಿಢೀರ್ ದಾಳಿ ನಡೆಸಿ ರಸಗೊಬ್ಬರ ದಾಸ್ತಾನು, ಅಧಿಕೃತ ಪರವಾನಿಗೆ ಹಾಗೂ ಇನ್ನಿತರ ದಾಖಲಾತಿಗಳನ್ನು ಪರಿಶೀಲನೆ ನಡೆಸಿದರು. 

ವಿವಿಧ ರಸಗೊಬ್ಬರ ಹಾಗೂ ಕೀಟನಾಶಕಗಳ ಮಾದರಿಗಳನ್ನು  ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಯಿತು ಹಾಗೂ ನಿಯಮ ಪಾಲಿಸದ ರಸಗೊಬ್ಬರ ಮಾರಾಟಗಾರರಿಗೆ ನೋಟಿಸನ್ನು ನೀಡಿ ಮತ್ತೊಮ್ಮೆ ನಿಯಮ ಉಲ್ಲಂಘನೆ ಕಂಡು ಬಂದರೆ ಅಧಿಕೃತ ಪರವಾನಗಿಯನ್ನು ರದ್ದು ಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ತಾಲೂಕಿನಲ್ಲಿ ಮುಂಗಾರು ಹಂಗಾಮು ಇನ್ನೇನು ಪ್ರಾರಂಭವಾಗಲಿದ್ದು, ರೈತರು ಬೆಳೆದ ಬೆಳೆಗಳಿಗೆ ಸೂಕ್ತವಾದ ರಸಗೊಬ್ಬರಗಳ ದಾಸ್ತಾನು ಇದೆ 


ಕಡಿಮೆ ಇರುವ ರಸಗೊಬ್ಬರಗಳನ್ನು ದಾಸ್ತಾನು ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ರೈತರು ಅಧಿಕೃತ ಪರವಾನಗಿ ಹೊಂದಿರುವ ಅಂಗಡಿಗಳಿಂದ ಮಾತ್ರ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಬೇಕು ಹಾಗೂ ರಸಗೊಬ್ಬರ ಮಾರಾಟ ಗಾರರು ಎಂಆರ್ಪಿ ಬೆಲೆಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು ಮಾರಾಟ ಮಾಡಿದರೆ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮವನ್ನು ಕೈಗೊಳ್ಳಲಾಗುವುದು ಹಾಗೂ ರಸಗೊಬ್ಬರವನ್ನು ರೈತರಿಗೆ ವಿತರಿಸುವಾಗ  ಪಿಓಎಸ್ ಮಿಷಿನ ಮುಖಾಂತರ ವಿತರಣೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಿಬ್ಬಂದಿ ಪ್ರದೀಪ್ ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು