5:07 PM Sunday20 - July 2025
ಬ್ರೇಕಿಂಗ್ ನ್ಯೂಸ್
SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ…

ಇತ್ತೀಚಿನ ಸುದ್ದಿ

ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳಿಂದ ದೂರವಿರಿ : ಡಾ. ರಾಜೇಶ್ ಆಳ್ವ

21/09/2022, 12:47

ಮಂಗಳೂರು(reporterkarnataka.com) : ಇಂದಿನ ಮಹಿಳೆಯರಲ್ಲಿ ಅತಿ ಹೆಚ್ಚು ಅಸ್ವಸ್ಥತೆಗಳಿಗೆ ಮೂಲಕ ಕಾರಣ ಪೋಷಣೆಗಳ ಮಾಹಿತಿ ಕೊರತೆ ಮತ್ತು ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಾಗಿದೆ. ಆದುದರಿಂದ ಸಾಂಪ್ರದಾಯಿಕ ಸೌಂದರ್ಯ ವರ್ಧಕಗಳ ಬಳಕೆ ಮತ್ತು ಶರೀರಕ್ಕೆ ಬೇಕಾದ ಪೋಷಕಾಂಶಗಳ ಬಗ್ಗೆ  ಅರಿತುಕೊಳ್ಳುವಲ್ಲಿ ಮತ್ತು ಮಾಹಿತಿ ನೀಡುವಲ್ಲಿ ಬ್ಯೂಟಿ ಪಾರ್ಲರ್ ಗಳು ಕಾರ್ಯಪ್ರವೃತ್ತರಾಗುವುದು ಉಚಿತ ಎಂದು ಮಾರ್ಕ್ ಆಟ್ ಡೈರೆಕ್ಟ್ ನಿರ್ದೇಶಕ ಡಾ. ರಾಜೇಶ್ ಆಳ್ವ ಅಭಿಪ್ರಾಯಪಟ್ಟರು. 

ಅವರು ಕರ್ನಾಟಕ ಐಕ್ಯ ಪಾರ್ಲರ್ ಅಸೋಸಿಯೇಷನ್ ನೇತೃತ್ವದಲ್ಲಿ ಮತ್ತು ನೆಟ್ಸರ್ಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಉಚಿತ ಮೇಕಪ್ ನೋಡಿ ಕಲಿ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. 

ಕಾರ್ಯಕ್ರಮದ ಉದ್ಘಾಟನೆಯನ್ನು ನೆಟ್ಸರ್ಫ್ ಪುಣೆ ಸಂಸ್ಥೆಯ ತರಬೇತುದಾರರಾದ ಬಾಲಚಂದ್ರ ಕಿರಣ್ ಲಾತ್ಕಾರ್ ನೆರವೇರಿಸಿದರು. ಕರ್ನಾಟಕ ಐಕ್ಯ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಪೌಲಿನ್ ಕ್ರಾಸ್ತಾ  ಅವರು ಅಧ್ಯಕ್ಷತೆ ವಹಿಸಿದರು.

ನಂತರ ನಡೆದ ತರಬೇತಿ ಶಿಬಿರದಲ್ಲಿ ಖ್ಯಾತ ಸೆಲೆಬ್ರಿಟಿ ಆರ್ಟಿಸ್ಟ್ ಪಂಕಜ ಬೆಂಗಳೂರು ಮೇಕಪ್ ನೋಡಿ ಕಲಿ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅದೇ ರೀತಿ ಶಾರದಾ ಜಲ್ಲಿ ಮತ್ತು ನೈಲ್ ಆರ್ಟ್ ಇವುಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಗೀತಾ ದಿನೇಶ್, ವನಿತಾ ರಾವ್, ಸೌಮ್ಯ ಶ್ರೀ, ಲೊತಿಸಿಲ ದಂತಿಸ್,  ಮುಂತಾದವರು ನಡೆಸಿಕೊಟ್ಟರು. ನೆಟ್ಸರ್ಫ್ ಸೌತ್ ಇಂಡಿಯಾ ಅಸ್ಮಿತಾ ಕೋ ಆರ್ಡಿನೇಟರ್ ರಮೊಲಅವರು ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಪರಿಹಾರ ಈ ಬಗ್ಗೆ ಮಾಹಿತಿ ನೀಡಿದರು. ಲತಾ ಹರೀಶ್ ಇವರು ಕಾರ್ಯಕ್ರಮ ನಿರ್ವಹಣೆ ಮಾಡಿ, ಪ್ರಮೀಳಾ ಪ್ರಸಾದ್ ಇವರು ಸ್ವಾಗತಿಸಿ. ಮಂಜುಳಾ ನಾಯಕ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು