12:02 PM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳಿಂದ ದೂರವಿರಿ : ಡಾ. ರಾಜೇಶ್ ಆಳ್ವ

21/09/2022, 12:47

ಮಂಗಳೂರು(reporterkarnataka.com) : ಇಂದಿನ ಮಹಿಳೆಯರಲ್ಲಿ ಅತಿ ಹೆಚ್ಚು ಅಸ್ವಸ್ಥತೆಗಳಿಗೆ ಮೂಲಕ ಕಾರಣ ಪೋಷಣೆಗಳ ಮಾಹಿತಿ ಕೊರತೆ ಮತ್ತು ರಾಸಾಯನಿಕ ಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಾಗಿದೆ. ಆದುದರಿಂದ ಸಾಂಪ್ರದಾಯಿಕ ಸೌಂದರ್ಯ ವರ್ಧಕಗಳ ಬಳಕೆ ಮತ್ತು ಶರೀರಕ್ಕೆ ಬೇಕಾದ ಪೋಷಕಾಂಶಗಳ ಬಗ್ಗೆ  ಅರಿತುಕೊಳ್ಳುವಲ್ಲಿ ಮತ್ತು ಮಾಹಿತಿ ನೀಡುವಲ್ಲಿ ಬ್ಯೂಟಿ ಪಾರ್ಲರ್ ಗಳು ಕಾರ್ಯಪ್ರವೃತ್ತರಾಗುವುದು ಉಚಿತ ಎಂದು ಮಾರ್ಕ್ ಆಟ್ ಡೈರೆಕ್ಟ್ ನಿರ್ದೇಶಕ ಡಾ. ರಾಜೇಶ್ ಆಳ್ವ ಅಭಿಪ್ರಾಯಪಟ್ಟರು. 

ಅವರು ಕರ್ನಾಟಕ ಐಕ್ಯ ಪಾರ್ಲರ್ ಅಸೋಸಿಯೇಷನ್ ನೇತೃತ್ವದಲ್ಲಿ ಮತ್ತು ನೆಟ್ಸರ್ಫ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ನಡೆದ ಒಂದು ದಿನದ ಉಚಿತ ಮೇಕಪ್ ನೋಡಿ ಕಲಿ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. 

ಕಾರ್ಯಕ್ರಮದ ಉದ್ಘಾಟನೆಯನ್ನು ನೆಟ್ಸರ್ಫ್ ಪುಣೆ ಸಂಸ್ಥೆಯ ತರಬೇತುದಾರರಾದ ಬಾಲಚಂದ್ರ ಕಿರಣ್ ಲಾತ್ಕಾರ್ ನೆರವೇರಿಸಿದರು. ಕರ್ನಾಟಕ ಐಕ್ಯ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಪೌಲಿನ್ ಕ್ರಾಸ್ತಾ  ಅವರು ಅಧ್ಯಕ್ಷತೆ ವಹಿಸಿದರು.

ನಂತರ ನಡೆದ ತರಬೇತಿ ಶಿಬಿರದಲ್ಲಿ ಖ್ಯಾತ ಸೆಲೆಬ್ರಿಟಿ ಆರ್ಟಿಸ್ಟ್ ಪಂಕಜ ಬೆಂಗಳೂರು ಮೇಕಪ್ ನೋಡಿ ಕಲಿ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅದೇ ರೀತಿ ಶಾರದಾ ಜಲ್ಲಿ ಮತ್ತು ನೈಲ್ ಆರ್ಟ್ ಇವುಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಗೀತಾ ದಿನೇಶ್, ವನಿತಾ ರಾವ್, ಸೌಮ್ಯ ಶ್ರೀ, ಲೊತಿಸಿಲ ದಂತಿಸ್,  ಮುಂತಾದವರು ನಡೆಸಿಕೊಟ್ಟರು. ನೆಟ್ಸರ್ಫ್ ಸೌತ್ ಇಂಡಿಯಾ ಅಸ್ಮಿತಾ ಕೋ ಆರ್ಡಿನೇಟರ್ ರಮೊಲಅವರು ಮಹಿಳೆಯರ ಆರ್ಥಿಕ ಸ್ವಾವಲಂಬನೆ ಮತ್ತು ಪರಿಹಾರ ಈ ಬಗ್ಗೆ ಮಾಹಿತಿ ನೀಡಿದರು. ಲತಾ ಹರೀಶ್ ಇವರು ಕಾರ್ಯಕ್ರಮ ನಿರ್ವಹಣೆ ಮಾಡಿ, ಪ್ರಮೀಳಾ ಪ್ರಸಾದ್ ಇವರು ಸ್ವಾಗತಿಸಿ. ಮಂಜುಳಾ ನಾಯಕ್ ಧನ್ಯವಾದವಿತ್ತರು.

ಇತ್ತೀಚಿನ ಸುದ್ದಿ

ಜಾಹೀರಾತು