4:55 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಜುಲೈ 18ರಂದು ಮತದಾನ; ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ

09/06/2022, 22:36

ಹೊಸದಿಲ್ಲಿ(reporterkarnataka.com):

ರಾಷ್ಟಪತಿ ಚುನಾವಣೆಯ ದಿನಾಂಕ ಪ್ರಕಟಿಸಲಾಗಿದೆ. ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. 

ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹಾಲಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ, ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

ಚುನಾವಣಾ ವೇಳಾಪಟ್ಟಿ:

ಜೂನ್ 29- ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ.

ಜುಲೈ 18- ಮತದಾನ ಪ್ರಕ್ರಿಯೆ.

ಜುಲೈ 21- ಮತ ಎಣಿಕೆ ಕಾರ್ಯ.

2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಜುಲೈ 25ರೊಳಗೆ ನೂತನ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಿರಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು