5:37 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ!

21/03/2022, 15:40

ಬೆಂಗಳೂರು(reporterkarnataka.com): ಉಕ್ರೇನ್‌ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್‌ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂಧಿಸಿದ ದಾಖಲೆಗಳನ್ನು ನವೀನ್ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಕೇಂದ್ರ ಸರ್ಕಾರದ ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಕರ್ನಾಟಕದ 572 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗಿದೆ. ನವೀನ್‌ ಮೃತದೇಹ ಇರಿಸಲಾಗಿದ್ದ ಶವಾಗಾರದ ಸಮೀಪದಲ್ಲೇ ದಾಳಿ ನಡೆದಿದ್ದರಿಂದ ಮೃತದೇಹ ತರುವ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಎಂದುಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನಲ್ಲಿ ಮೃತದೇಹ ತರಲಾಗಿದೆ. ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಪಾರ್ಥಿವ ಶರೀರವನ್ನು ರವಾನಿಸಲಾಗಿತ್ತು.

ನಂತರ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಯಿತು.  

ನವೀನ್‌ ಪಾರ್ಥಿವ ಶರೀರಕ್ಕೆ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುತ್ತದೆ. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆ ತಿಳಿಸಿದ್ದರು.

ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ರಷ್ಯಾ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ನವೀನ್‌ ಮೃತಪಟ್ಟಿದ್ದರು. ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್‌ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಕ್ಷಿಪಣಿ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು