4:57 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಷ್ಯಾ- ಉಕ್ರೇನ್ ಸಂಘರ್ಷ: ಕ್ಷಿಪಣಿ ದಾಳಿಗೆ ಮೃತಪಟ್ಟ ನವೀನ್ ಪಾರ್ಥಿವ ಶರೀರ ಹಾವೇರಿಗೆ; 20 ದಿನಗಳ ಬಳಿಕ ರವಾನೆ!

21/03/2022, 15:40

ಬೆಂಗಳೂರು(reporterkarnataka.com): ಉಕ್ರೇನ್‌ನಲ್ಲಿ ಕ್ಷಿಪಣಿ ದಾಳಿಯಲ್ಲಿ ಮೃತಪಟ್ಟಿರುವ ಹಾವೇರಿಯ ನವೀನ್‌ ಗ್ಯಾನಗೌಡರ ಮೃತದೇಹ ಇಂದು ನಸುಕಿನಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾರ್ಥಿವ ಶರೀರವನ್ನು ಹಾಗೂ ಸಂಬಂಧಿಸಿದ ದಾಖಲೆಗಳನ್ನು ನವೀನ್ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಕೇಂದ್ರ ಸರ್ಕಾರದ ಆಪರೇಷನ್‌ ಗಂಗಾ ಕಾರ್ಯಾಚರಣೆಯ ಮೂಲಕ ಕರ್ನಾಟಕದ 572 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಕರೆತರಲಾಗಿದೆ. ನವೀನ್‌ ಮೃತದೇಹ ಇರಿಸಲಾಗಿದ್ದ ಶವಾಗಾರದ ಸಮೀಪದಲ್ಲೇ ದಾಳಿ ನಡೆದಿದ್ದರಿಂದ ಮೃತದೇಹ ತರುವ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು ಎಂದುಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ಈ ಸಂದರ್ಭದಲ್ಲಿ ಮಾಧ್ಯಮಕ್ಕೆ ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸೋಮವಾರ ನಸುಕಿನಲ್ಲಿ ಮೃತದೇಹ ತರಲಾಗಿದೆ. ದುಬೈನಿಂದ ಎಮಿರೇಟ್ಸ್ ಇಕೆ 568 ವಿಮಾನದಲ್ಲಿ ಪಾರ್ಥಿವ ಶರೀರವನ್ನು ರವಾನಿಸಲಾಗಿತ್ತು.

ನಂತರ ಆಂಬುಲೆನ್ಸ್‌ನಲ್ಲಿ ಮೃತದೇಹವನ್ನು ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮಕ್ಕೆ ಕೊಂಡೊಯ್ಯಲಾಯಿತು.  

ನವೀನ್‌ ಪಾರ್ಥಿವ ಶರೀರಕ್ಕೆ ವೀರಶೈವ ಪದ್ಧತಿ ಪ್ರಕಾರ ಪೂಜಾ ಕಾರ್ಯ ನೆರವೇರಿಸಲಾಗುತ್ತದೆ. ಸಂಜೆವರೆಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ದಾವಣಗೆರೆಯ ಎಸ್‌.ಎಸ್‌. ಆಸ್ಪತ್ರೆಗೆ ಮಗನ ಮೃತದೇಹವನ್ನು ದಾನ ಮಾಡುತ್ತೇವೆ’ ಎಂದು ಮೃತ ನವೀನ ಗ್ಯಾನಗೌಡರ ತಂದೆ ಶೇಖರಪ್ಪ ಗ್ಯಾನಗೌಡರ ಈ ಹಿಂದೆ ತಿಳಿಸಿದ್ದರು.

ಮಾರ್ಚ್ 1 ರಂದು ಉಕ್ರೇನ್‌ನ ಹಾರ್ಕಿವ್‌ನಲ್ಲಿ ರಷ್ಯಾ ಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ನವೀನ್‌ ಮೃತಪಟ್ಟಿದ್ದರು. ಮೃತ ಯುವಕ ನಾಲ್ಕನೇ ವರ್ಷದ ವೈದ್ಯಕೀಯ ಕೋರ್ಸ್‌ ಓದುತ್ತಿದ್ದರು. ಒಂದು ವಾರ ಕಾಲ ಬಂಕರ್‌ನಲ್ಲಿ ಇದ್ದ ಅವರು ಹೊರಗೆ ಬಂದಾಗ ಕ್ಷಿಪಣಿ ದಾಳಿಗೆ ಸಿಲುಕಿ ಮೃತಪಟ್ಟಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು