6:14 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ರಸ್ತೆ ಆಳುವ ಬೀದಿ ನಾಯಿಗಳು: ಶ್ರೀನಿವಾಸಪುರದಲ್ಲಿ ಶ್ವಾನಗಳದ್ದೇ ಕಾಟ; ಕಣ್ಮುಚ್ಚಿ ಕುಳಿತ ಪುರಸಭೆ ಅಧಿಕಾರಿಗಳು!

09/09/2024, 16:09

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಕಾಟ ಜೋರಾಗಿದ್ದು, ಕೆಲ ಕಡೆ ಜನರು ಸಂಚರಿಸುವುದೇ ಕಷ್ಟವಾಗಿದೆ.
ಪಟ್ಟಣದಲ್ಲಿನ ಬಹುತೇಕ ರಸ್ತೆಗಳಲ್ಲಿ ಬೀದಿ ನಾಯಿಗಳು ಹೆಚ್ಚಿವೆ. ಹೆಜ್ಜೆ ಹೆಜ್ಜೆಗೂ ಗುರ್‌ ಎನ್ನುವ ನಾಯಿಗಳು ಸಹಜವಾಗಿಯೇ ಸಾರ್ವಜನಿಕರಲ್ಲಿ ಭೀತಿ ಸೃಷ್ಟಿಸುತ್ತಿವೆ. ಬೀದಿ ನಾಯಿಗಳ ಹಾವಳಿಯಿಂದ ಜನರು ರೋಸಿ ಹೋಗಿದ್ದಾರೆ. ಪಾದಚಾರಿಗಳು ಮತ್ತು ದ್ವಿ ಚಕ್ರ ವಾಹನಗಳ ಸವಾರರ ಸಂಚಾರಕ್ಕೆ ಸಂಚಕಾರ ಎದುರಾಗಿದೆ.
ಬಡಾವಣೆಗಳಲ್ಲಿ ತಿಂಡಿ, ತಿನಿಸುಗಳನ್ನು ಹಿಡಿದು ಸಾಗುವ ಪುಟ್ಟ ಮಕ್ಕಳ ಮೈಮೇಲೆ ಬೀದಿ ನಾಯಿಗಳು ದಾಳಿ ಇಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿದೆ.
ಬೀದಿ ನಾಯಿಗಳ ಹಾವಳಿ ಪಟ್ಟಣದ ರಾಜಾಜಿ ರಸ್ತೆ , ಆಜಾದ್ ರಸ್ತೆ , ಹೈದರಾಲಿ ಮೊಹಲ್ಲಾ ,ಗಫರ್ ಖಾನ್ ಮೊಹಲ್ಲಾ, ಜಾಕಿರ್ ಹುಸೇನ್ ಮೊಹಲ್ಲಾ , ಪಟ್ಟಣದ ಹಲವು ಬಡಾವಣೆಗಳಲ್ಲಿ ಬೀದಿಗಳ ನಾಯಿಗಳ ಹಾವಳಿ ಹೆಚ್ಚಾಗಿದೆ. ನಾಯಿಗಳ ಕಾಟ ತಪ್ಪಿಸುವಲ್ಲಿ ಸ್ಥಳೀಯ ಪುರಸಭೆ ಅಧಿಕಾರಿಗಳು ಮತ್ತು ಪುರಸಭೆ ಸದಸ್ಯರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಸ್ಥಳೀಯರು ಹಿಡಿಶಾಪ ಹಾಕುತ್ತಿದ್ದಾರೆ.
ಬೀದಿ ನಾಯಿಗಳ ಕಾಟದಿಂದ ಆರೋಗ್ಯ ಸಮಸ್ಯೆಗಳು ಉಂಟುವಾಗುತ್ತಿದೆ ನಾಯಿಗಳಿಂದ ಹರಡುವ ರೋಗಗಳು, ಸುಸ್ತು, ಮತ್ತು ಕೀಟಗಳು ಇತರ ಜೀವಿಗಳನ್ನು ಬಾಧಿಸುತ್ತವೆ. ಬೀದಿ ನಾಯಿಗಳು ಸಾಮಾನ್ಯವಾಗಿ ಜ್ವರ, ಕಾಂಟ್ಯಾರಿಯನ್ ಇತ್ಯಾದಿ ಕಾಯಿಲೆಗಳನ್ನು ಹರಿಸುತ್ತವೆ, ಇದರಿಂದ ಪಟ್ಟಣದಲ್ಲಿ ಆರೋಗ್ಯ ಸಮಸ್ಯೆಗಳನ್ನು ಉಂಟುವಾಗುತ್ತಿದೆ ಎಂದು ಸ್ಥಳೀಯರು ಹೇಳಲಾಗುತ್ತಿದೆ.
*ಮಾಂಸಭಕ್ಷಣೆಗೆ ನಾಯಿಗಳು:*
ಪಟ್ಟಣದಲ್ಲಿರುವ ಮಾಂಸದ ಅಂಗಡಿಗಳ ತ್ಯಾಜ್ಯಕ್ಕಾಗಿ ದಿನವಿಡಿ ಹತ್ತಾರು ನಾಯಿಗಳು ಕಾಯುತ್ತಾ ಇರುತ್ತವೆ. ರಾತ್ರಿಯಲ್ಲೂ ಇದೇ ಮಾಂಸದಂಗಡಿಗಳ ಮುಂದೆ ಇರುವ ರಸ್ತೆಗಳಲ್ಲಿ ಬೀಡು ಬಿಟ್ಟಿರುವ ನಾಯಿಗಳು ಬೈಕ್‌ಗಳ ಮೇಲೆರಗುತ್ತಿವೆ.
ಬೆಳಗಿನ ಜಾವ ವ್ಯಾಯಾಮ ಹೋಗುವ ಮಹಿಳೆಯರು ಮತ್ತು ವೃದ್ಧಾಪ್ಯ ಸ್ಥಳೀಯರು , ನಮಾಜ್ , ಅರಬ್ಬಿ ಮದ್ರಸಗಳಿಗೆ , ಶಾಲೆಗಳು ತೆರಳುವ ಮೇಲೆ ಮತ್ತು ಚಿಕ್ಕ ಮಕ್ಕಳಗಳ ಮೇಲೆ ನಾಯಿಗಳ ಗುಂಪು ದಾಳಿ ಮಾಡಲು ಮುಂದಾಗುವುದು , ಬೆಳಗಿನ ಹೊತ್ತಿನಲ್ಲೂಕಪ್ಪು ಬಣ್ಣದ ಪ್ಲಾಸ್ಟಿಕ್‌ಗಳಲ್ಲಿ ಯಾವುದೇ ತಿಂಡಿ, ತಿನಿಸುಗಳನ್ನು ಬೈಕ್‌ ಹಾಗೂ ಸೈಕಲ್‌ ಹ್ಯಾಂಡಲ್‌ಗೆ ಹಾಕಿಕೊಂಡು ಹೋಗುತ್ತಿರುವುದು ನಾಯಿಗಳ ಕಣ್ಣಿಗೆ ಬಿದ್ದರೆ, ಅವುಗಳನ್ನು ಬಾಯಿಯಿಂದ ಕಚ್ಚಿ ಕಿತ್ತುಕೊಳ್ಳುತ್ತಿವೆ. ಜಾಕಿರ್ ಹುಸೇನ್ ಮೊಹಲ್ಲಾ ಹಾಗೂ ಕೆಲ ಬಡಾವಣೆಗಳಲ್ಲಿ ನಾಯಿಗಳ ದಾಳಿಗೆ ಕುರಿ , ಮೇಕೆ ಮತ್ತು ಕೋಳಿಗಳು ಸಹ ಬಲಿ ಯಾಗಿದ್ದಾರೆ , ಚಿಕ್ಕಮಕ್ಕಳು ಅಂಗಡಿಗಳಿಂದ ಬಿಸ್ಕಿಟ್‌, ಬನ್‌ಗಳನ್ನು ತರುವುದಕ್ಕೂಹೆದರುತ್ತಿದ್ದಾರೆ.
ಈಗಲಾದರೂ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ನಾಯಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು. ಅಲ್ಲದೇ ಮಾಂಸದ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು