9:10 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ರಸ್ತೆ ಅಗಲೀಕರಣ: ಸಂತ್ರಸ್ತರಿಗೆ ವೈಯಕ್ತಿಕ ಪರಿಹಾರ ವಿತರಿಸಿದ ಶಾಸಕ ನಾರಾ ಭರತ್ ರೆಡ್ಡಿ

08/12/2024, 20:05

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯ 7,8ನೇ ವಾರ್ಡಿನ ಬಾಪೂಜಿ ನಗರದಲ್ಲಿ ರಸ್ತೆ ಅಗಲೀಕರಣದ ವೇಳೆ ಸಂಪೂರ್ಣ ಮನೆ ತೆರವು ಮಾಡಿಕೊಂಡ 12 ಜನ ಸಂತ್ರಸ್ತರಿಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ವೈಯಕ್ತಿಕವಾಗಿ ತಲಾ 50 ಸಾವಿರ ರೂ. ಪರಿಹಾರ ವಿತರಿಸಿದರು.
ಬಳ್ಳಾರಿಯ ಗಾಂಧಿ ನಗರದ ತಮ್ಮ ಕಚೇರಿ ವಿಜಯೀಭವದಲ್ಲಿ ಭಾನುವಾರ ಮಧ್ಯಾಹ್ನ ಚೆಕ್ ಮೂಲಕ ಪರಿಹಾರ ವಿತರಿಸಿದರು.
ಬಾಪೂಜಿ ನಗರದ ಫಲಾನುಭವಿಗಳಾದ ಲಕ್ಷ್ಮೀ, ಇಂದು, ಹುಲಿಯಮ್ಮ, ಮೀನಾಕ್ಷಿ, ರತ್ನಮ್ಮ, ಗಂಗಮ್ಮ, ಮಾರೆಮ್ಮ, ಶಿವಮ್ಮ, ಹೆಚ್.ವಂದನಾ, ಬಿ.ಗಂಗಮ್ಮ, ಸರಸ್ವತಿ, ವಿದ್ಯಾಶ್ರೀ ಅವರು ಶಾಸಕ ನಾರಾ ಭರತ್ ರೆಡ್ಡಿಯವರಿಂದ ಚೆಕ್ ಪಡೆದುಕೊಂಡರು.

ಅಂದ್ರಾಳು ಸಮೀಪ ಈಗಾಗಲೇ ಸರ್ಕಾರಿ ಜಾಗವನ್ನು ಗುರುತಿಸಲಾಗಿದ್ದು, ಅಲ್ಲಿ ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮನೆ ಕಳೆದುಕೊಂಡಿರುವ 12 ಜನರಿಗೆ ಶೀಘ್ರ ಮನೆ ನಿರ್ಮಾಣ ಮಾಡಿ ಕೊಡಲಾಗುವುದು ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದರು.
ಈ ಸಂದರ್ಭ ಪಾಲಿಕೆಯ ಸದಸ್ಯರಾದ ರಾಮಾಂಜನೇಯ, ಕಾಂಗ್ರೆಸ್ ಮುಖಂಡರಾದ ಎ.ಮಾನಯ್ಯ, ಶಿವರಾಜ್, ಶಂಕರ್, ನಾಗೇಂದ್ರಪ್ಪ, ಉದ್ಯಮಿ ಚಂದ್ರಶೇಖರ ರೆಡ್ಡಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು