2:43 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಗೆ ಆಸರೆ ನೀಡಿದ ಸರಕಾರಿ ವೈದ್ಯ: ತಾಯಿ- ಮಗು ಆರೋಗ್ಯ

27/06/2023, 13:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬ ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.


ಮೂಲತಃ ಅಜ್ಜಂಪುರ ತಾಲೂಕಿನ ಗಡಿರಂಗಾಪುರ ಗ್ರಾಮದ ಯಶೋಧ ಎಂಬ ಮಹಿಳೆಗೆ 9 ತಿಂಗಳು ತುಂಬಿತ್ತು. ಬಿ ನೆಗೆಟಿವ್ ರಕ್ತದ ಗುಂಪು ಹೊಂದಿರುವ ಗರ್ಭೀಣಿ ಮಹಿಳೆ ಯಶೋಧ ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಗೆ ಹೊರಟಿದ್ದರು. ಆಕೆ ಜೊತೆ ಬೇರೊಬ್ಬಳು ಮಹಿಳೆ ಇದ್ದಳು. ಅಜ್ಜಂಪುರದಿಂದ ತರೀಕೆರೆಗೆ ಬಂದು ಶಿವಮೊಗ್ಗ ತೆರಳಲು ಬಸ್ ಕಾಯುವಾಗ ತೀವ್ರವಾದ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆಗ ಸ್ಥಳದಲ್ಲಿದ್ದ ಸ್ಥಳೀಯರು ಸರ್ಕಾರಿ ಆಸ್ಪತ್ರೆಗೆ ಹೋಗುವಂತೆ ಸೂಚಿಸಿದ್ದಾರೆ. ಆಸ್ಪತ್ರೆಗೆ ಹೊರಟ ಮಹಿಳೆ ಆಸ್ಪತ್ರೆ ಮುಟ್ಟುವ ಮುನ್ನವೇ ಆಸ್ಪತ್ರೆಯ ತುಸು ದೂರದಲ್ಲಿ ತೀವ್ರವಾದ ನೋವಿನಿಂದ ಬಳಲುತ್ತಿದ್ದಳು. ಅದೇ ಮಾರ್ಗದಲ್ಲಿ ಹೋಗುತ್ತಿದ್ದ ತಾಲೂಕು ವೈದ್ಯಾಧಿಕಾರಿ ಆರ್. ದೇವರಾಜ್ ಆಕೆಯನ್ನ ಆಸ್ಪತ್ರೆಗೆ ಸೇರಿಸಿ ಪ್ರಸೂತಿ ವೈದ್ಯರನ್ನು ಕರೆಸಿ ಹೆರಿಗೆ ಮಾಡಿಸಿದ್ದು, ಇದೀಗ ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದಾರೆ.‌ ಗರ್ಭಿಣಿ ಮಹಿಳೆ ಯಶೋಧ ಬಿ ನೆಗೆಟಿವ್ ರಕ್ತಕ್ಕಾಗಿಯೇ ಶಿವಮೊಗ್ಗ ಹೋಗುತ್ತಿದ್ದರು. ವೈದ್ಯರು ನಿನಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಧೈರ್ಯ ತುಂಬಿ ಹೆರಿಗೆ ಮಾಡಿಸುತ್ತಾರೆ. ಆರಂಭದ ಮೂರು ತಿಂಗಳು ಖಾಸಗಿ ಆಸ್ಪತ್ರೆಗೆ ತೋರಿಸಿದ್ದ ಗರ್ಭಿಣಿ ಯಶೋಧ ಅಲ್ಲಿ ಹೆರಿಗೆಗೆ 30000 ಹಣ ಕೇಳಿದರು ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೋಗುತ್ತಿದ್ದರು. ಸರ್ಕಾರಿ ಆಸ್ಪತ್ರೆ ವೈದ್ಯರ ಕೆಲಸಕ್ಕೆ ಸಾರ್ವಜನಿಕರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.‌ ಮಹಿಳೆ ಯಶೋಧ ಕೂಡ ತರೀಕೆರೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೃತಜ್ಞತೆ ಸಲ್ಲಿಸಿದ್ದಾಳೆ.‌

ಇತ್ತೀಚಿನ ಸುದ್ದಿ

ಜಾಹೀರಾತು