1:09 PM Saturday31 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿ ಸರಿಪಡಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, 2 ದಿನಗಳಲ್ಲಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್

18/08/2022, 23:24

ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ‌ ರಸ್ತೆ ಗುಂಡಿಗಳನ್ನು 2 ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್  ಹೇಳಿದ್ದಾರೆ. 

ಪಾಲಿಕೆ ಆಯುಕ್ತರು, ಮೇಯರ್, ಪಾಲಿಕೆ ಮುಖ್ಯ ಸಚೇತಕರು ಹಾಗೂ ಅಧಿಕಾರಿಗಳ‌ ಸಭೆ ನಡೆಸಿದ ಶಾಸಕ ಕಾಮತ್, ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ‌ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಪಾಲಿಕೆ ವತಿಯಿಂದ ಕ್ರಮ ಕೈಗೊಳ್ಳಲಾಗುವುದು‌‌. ಸದ್ಯ ಪಾಲಿಕೆಯಿಂದ ನೀಡಲಾಗಿರುವ‌ ವಾಟ್ಸ್ ಆಪ್ ಸಂಖ್ಯೆಗೆ  ಹಲವರು ಭಾವಚಿತ್ರಗಳನ್ನು ಕಳಿಸಿದ್ದಾರೆ. ಆ ಎಲ್ಲಾ ಗುಂಡಿಗಳನ್ನು ಮುಚ್ಚುವ ಕೆಲಸ ನಾಳೆಯಿಂದ ಪ್ರಾರಂಭವಾಗಲಿದೆ. ನಗರದಲ್ಲಿ 2 ವರ್ಷಗಳಲ್ಲಿ ಸುರಿಯುವ ಪ್ರಮಾಣದ ಮಳೆ ಒಂದೇ ತಿಂಗಳಿನಲ್ಲಿ ಸುರಿದ ಪರಿಣಾಮ ರಸ್ತೆ ಗುಂಡಿಗಳು ನಿರ್ಮಾಣವಾಗಿದೆ. ವರ್ಷದ 7 ತಿಂಗಳ ಮಳೆಯ ಸಂದರ್ಭದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಳೆಯ ಸಂದರ್ಭದಲ್ಲಿ ಡಾಮರು ಅಳವಡಿಸಿದರೂ ಎದ್ದು ಹೋಗುತ್ತಿರುವ‌ ಕಾರಣ ಕಾಮಗಾರಿ ಸ್ಥಗಿತಗೊಂಡಿತ್ತು ಎಂದು ಹೇಳಿದರು. 

ನಗರದ ವಿವಿಧ ಕಡೆಗಳಲ್ಲಿ ಸ್ಮಾರ್ಟ್ ಸಿಟಿ, ಕೆಯುಡಿಎಫ್ಸಿ, ಜಲಸಿರಿ, ಗೈಲ್ ಗ್ಯಾಸ್ ಕಾಮಗಾರಿಗಳು ನಡೆಯುತ್ತಿವೆ. ಕೋವಿಡ್ ಕಾರಣಗಳಿಂದ ಸಾವಿರಾರು ವಲಸೆ ಕಾರ್ಮಿಕರು ಊರಿಗೆ ತೆರಳಿದ್ದು ನಿರೀಕ್ಷಿತ ಮಟ್ಟದಲ್ಲಿ ಕಾರ್ಮಿಕರು ವಾಪಸಾಗದೆ ಇರುವ‌ ಕಾರಣ 2 ವರ್ಷಗಳಿಂದ ಕಾಮಗಾರಿಯ ವಿಳಂಬವಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನ ಮಾಡದಿದ್ದರೆ ಅನುದಾನದ ವಾಯಿದೆ ಮುಕ್ತಾಯವಾಗುವ ಕಾರಣದಿಂದ ಕೆಲಸಗಳಿಗೆ ವೇಗ ನೀಡಲಾಗಿದೆ. ಆದರೆ ಅದೇ ಸಂದರ್ಭದಲ್ಲಿ ವಿಪರೀತ ಮಳೆಯ ಕಾರಣ ಸಮಸ್ಯೆಯಾಗುತ್ತಿದೆ.

#patholeSeAzadi ಅಭಿಯಾನದ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಡಾಮರು ಕಂಪನಿಗಳೂ ಸ್ಥಗಿತಗೊಳ್ಳುವ ಕಾರಣ ಸಾರ್ವಜನಿಕರಿಗೆ ಸಮಸ್ಯೆಗಳಾಗಿರುವ‌ ಕುರಿತು ವಿಷಾದಿಸುತ್ತೇವೆ ಎಂದು ಶಾಸಕ ಕಾಮತ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು