4:29 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ರಸ್ತೆ ಗುಂಡಿ ಸರಿಪಡಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, 2 ದಿನಗಳಲ್ಲಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್

18/08/2022, 23:24

ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ‌ ರಸ್ತೆ ಗುಂಡಿಗಳನ್ನು 2 ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್  ಹೇಳಿದ್ದಾರೆ. 

ಪಾಲಿಕೆ ಆಯುಕ್ತರು, ಮೇಯರ್, ಪಾಲಿಕೆ ಮುಖ್ಯ ಸಚೇತಕರು ಹಾಗೂ ಅಧಿಕಾರಿಗಳ‌ ಸಭೆ ನಡೆಸಿದ ಶಾಸಕ ಕಾಮತ್, ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ‌ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಪಾಲಿಕೆ ವತಿಯಿಂದ ಕ್ರಮ ಕೈಗೊಳ್ಳಲಾಗುವುದು‌‌. ಸದ್ಯ ಪಾಲಿಕೆಯಿಂದ ನೀಡಲಾಗಿರುವ‌ ವಾಟ್ಸ್ ಆಪ್ ಸಂಖ್ಯೆಗೆ  ಹಲವರು ಭಾವಚಿತ್ರಗಳನ್ನು ಕಳಿಸಿದ್ದಾರೆ. ಆ ಎಲ್ಲಾ ಗುಂಡಿಗಳನ್ನು ಮುಚ್ಚುವ ಕೆಲಸ ನಾಳೆಯಿಂದ ಪ್ರಾರಂಭವಾಗಲಿದೆ. ನಗರದಲ್ಲಿ 2 ವರ್ಷಗಳಲ್ಲಿ ಸುರಿಯುವ ಪ್ರಮಾಣದ ಮಳೆ ಒಂದೇ ತಿಂಗಳಿನಲ್ಲಿ ಸುರಿದ ಪರಿಣಾಮ ರಸ್ತೆ ಗುಂಡಿಗಳು ನಿರ್ಮಾಣವಾಗಿದೆ. ವರ್ಷದ 7 ತಿಂಗಳ ಮಳೆಯ ಸಂದರ್ಭದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಳೆಯ ಸಂದರ್ಭದಲ್ಲಿ ಡಾಮರು ಅಳವಡಿಸಿದರೂ ಎದ್ದು ಹೋಗುತ್ತಿರುವ‌ ಕಾರಣ ಕಾಮಗಾರಿ ಸ್ಥಗಿತಗೊಂಡಿತ್ತು ಎಂದು ಹೇಳಿದರು. 

ನಗರದ ವಿವಿಧ ಕಡೆಗಳಲ್ಲಿ ಸ್ಮಾರ್ಟ್ ಸಿಟಿ, ಕೆಯುಡಿಎಫ್ಸಿ, ಜಲಸಿರಿ, ಗೈಲ್ ಗ್ಯಾಸ್ ಕಾಮಗಾರಿಗಳು ನಡೆಯುತ್ತಿವೆ. ಕೋವಿಡ್ ಕಾರಣಗಳಿಂದ ಸಾವಿರಾರು ವಲಸೆ ಕಾರ್ಮಿಕರು ಊರಿಗೆ ತೆರಳಿದ್ದು ನಿರೀಕ್ಷಿತ ಮಟ್ಟದಲ್ಲಿ ಕಾರ್ಮಿಕರು ವಾಪಸಾಗದೆ ಇರುವ‌ ಕಾರಣ 2 ವರ್ಷಗಳಿಂದ ಕಾಮಗಾರಿಯ ವಿಳಂಬವಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನ ಮಾಡದಿದ್ದರೆ ಅನುದಾನದ ವಾಯಿದೆ ಮುಕ್ತಾಯವಾಗುವ ಕಾರಣದಿಂದ ಕೆಲಸಗಳಿಗೆ ವೇಗ ನೀಡಲಾಗಿದೆ. ಆದರೆ ಅದೇ ಸಂದರ್ಭದಲ್ಲಿ ವಿಪರೀತ ಮಳೆಯ ಕಾರಣ ಸಮಸ್ಯೆಯಾಗುತ್ತಿದೆ.

#patholeSeAzadi ಅಭಿಯಾನದ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಡಾಮರು ಕಂಪನಿಗಳೂ ಸ್ಥಗಿತಗೊಳ್ಳುವ ಕಾರಣ ಸಾರ್ವಜನಿಕರಿಗೆ ಸಮಸ್ಯೆಗಳಾಗಿರುವ‌ ಕುರಿತು ವಿಷಾದಿಸುತ್ತೇವೆ ಎಂದು ಶಾಸಕ ಕಾಮತ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು