3:04 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಸ್ತೆ ಗುಂಡಿ ಸರಿಪಡಿಸಲು ಈಗಾಗಲೇ ಸೂಚನೆ ನೀಡಲಾಗಿದ್ದು, 2 ದಿನಗಳಲ್ಲಿ ಪೂರ್ಣ: ಶಾಸಕ ವೇದವ್ಯಾಸ ಕಾಮತ್

18/08/2022, 23:24

ಮಂಗಳೂರು(reporterkarnataka.com): ಇತ್ತೀಚೆಗೆ ನಡೆದ ರಸ್ತೆ ಅಪಘಾತಗಳನ್ನು ಮನಗಂಡು ಅದರಲ್ಲೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆಗಳ ಗುಂಡಿಯನ್ನು ಸರಿಪಡಿಸಲು ಸೂಚನೆ ನೀಡಲಾಗಿದ್ದು ವಿವಿಧ ಕಡೆಗಳಲ್ಲಿ ರಸ್ತೆ ಗುಂಡಿಗಳನ್ನು ಸರಿಪಡಿಸಲಾಗಿದೆ. ಬಾಕಿಯುಳಿದಿರುವ‌ ರಸ್ತೆ ಗುಂಡಿಗಳನ್ನು 2 ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್  ಹೇಳಿದ್ದಾರೆ. 

ಪಾಲಿಕೆ ಆಯುಕ್ತರು, ಮೇಯರ್, ಪಾಲಿಕೆ ಮುಖ್ಯ ಸಚೇತಕರು ಹಾಗೂ ಅಧಿಕಾರಿಗಳ‌ ಸಭೆ ನಡೆಸಿದ ಶಾಸಕ ಕಾಮತ್, ಮಂಗಳೂರು ನಗರ ದಕ್ಷಿಣ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ‌ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದು, ರಸ್ತೆ ಗುಂಡಿಗಳನ್ನು ಮುಚ್ಚಲು ಪಾಲಿಕೆ ವತಿಯಿಂದ ಕ್ರಮ ಕೈಗೊಳ್ಳಲಾಗುವುದು‌‌. ಸದ್ಯ ಪಾಲಿಕೆಯಿಂದ ನೀಡಲಾಗಿರುವ‌ ವಾಟ್ಸ್ ಆಪ್ ಸಂಖ್ಯೆಗೆ  ಹಲವರು ಭಾವಚಿತ್ರಗಳನ್ನು ಕಳಿಸಿದ್ದಾರೆ. ಆ ಎಲ್ಲಾ ಗುಂಡಿಗಳನ್ನು ಮುಚ್ಚುವ ಕೆಲಸ ನಾಳೆಯಿಂದ ಪ್ರಾರಂಭವಾಗಲಿದೆ. ನಗರದಲ್ಲಿ 2 ವರ್ಷಗಳಲ್ಲಿ ಸುರಿಯುವ ಪ್ರಮಾಣದ ಮಳೆ ಒಂದೇ ತಿಂಗಳಿನಲ್ಲಿ ಸುರಿದ ಪರಿಣಾಮ ರಸ್ತೆ ಗುಂಡಿಗಳು ನಿರ್ಮಾಣವಾಗಿದೆ. ವರ್ಷದ 7 ತಿಂಗಳ ಮಳೆಯ ಸಂದರ್ಭದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದು ಸೇರಿದಂತೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಳೆಯ ಸಂದರ್ಭದಲ್ಲಿ ಡಾಮರು ಅಳವಡಿಸಿದರೂ ಎದ್ದು ಹೋಗುತ್ತಿರುವ‌ ಕಾರಣ ಕಾಮಗಾರಿ ಸ್ಥಗಿತಗೊಂಡಿತ್ತು ಎಂದು ಹೇಳಿದರು. 

ನಗರದ ವಿವಿಧ ಕಡೆಗಳಲ್ಲಿ ಸ್ಮಾರ್ಟ್ ಸಿಟಿ, ಕೆಯುಡಿಎಫ್ಸಿ, ಜಲಸಿರಿ, ಗೈಲ್ ಗ್ಯಾಸ್ ಕಾಮಗಾರಿಗಳು ನಡೆಯುತ್ತಿವೆ. ಕೋವಿಡ್ ಕಾರಣಗಳಿಂದ ಸಾವಿರಾರು ವಲಸೆ ಕಾರ್ಮಿಕರು ಊರಿಗೆ ತೆರಳಿದ್ದು ನಿರೀಕ್ಷಿತ ಮಟ್ಟದಲ್ಲಿ ಕಾರ್ಮಿಕರು ವಾಪಸಾಗದೆ ಇರುವ‌ ಕಾರಣ 2 ವರ್ಷಗಳಿಂದ ಕಾಮಗಾರಿಯ ವಿಳಂಬವಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿಗಳನ್ನು ಅನುಷ್ಠಾನ ಮಾಡದಿದ್ದರೆ ಅನುದಾನದ ವಾಯಿದೆ ಮುಕ್ತಾಯವಾಗುವ ಕಾರಣದಿಂದ ಕೆಲಸಗಳಿಗೆ ವೇಗ ನೀಡಲಾಗಿದೆ. ಆದರೆ ಅದೇ ಸಂದರ್ಭದಲ್ಲಿ ವಿಪರೀತ ಮಳೆಯ ಕಾರಣ ಸಮಸ್ಯೆಯಾಗುತ್ತಿದೆ.

#patholeSeAzadi ಅಭಿಯಾನದ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಹಾಗೂ ಪಾಲಿಕೆ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಮಳೆಗಾಲದ ಸಂದರ್ಭದಲ್ಲಿ ಡಾಮರು ಕಂಪನಿಗಳೂ ಸ್ಥಗಿತಗೊಳ್ಳುವ ಕಾರಣ ಸಾರ್ವಜನಿಕರಿಗೆ ಸಮಸ್ಯೆಗಳಾಗಿರುವ‌ ಕುರಿತು ವಿಷಾದಿಸುತ್ತೇವೆ ಎಂದು ಶಾಸಕ ಕಾಮತ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು