10:47 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!!

12/08/2022, 00:09

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ತನ್ನ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.



ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ ಹೊಂಡಾಕ್ಕೆ ಬಿದ್ದು ಸ್ಕೂಟರ್ ಪಲ್ಟಿಯಾಗಿ ಪಕ್ಕದ ಡಿವೈಡರ್ ಮೇಲೆ ಬಿದ್ದಿದ್ದರು. ಬಿದ್ದ ಏಟಿಗೆ ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದರು. ತನ್ನ ಗೆಳೆಯನ ಸಾವಿನಿಂದ ತೀವ್ರವಾಗಿ ನೊಂದ ಲಿಖಿತ್  ರೈ  ಅವರು ರಸ್ತೆಯ ಗುಂಡಿಗಳಿಂದ ಸ್ವಾತಂತ್ರ್ಯ ಸಿಗಬೇಕು ಹಾಗೂ ಆತಿಶ್‌ಗೆ ನ್ಯಾಯ ದೊರಕಬೇಕು ಎಂದು ಆಗ್ರಹಿಸಿ ಕೈಯಲ್ಲಿ ದೊಡ್ಡ ಪೋಸ್ಟರ್ ಹಿಡಿದು

ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಏಕಾಂಗಿ ಪ್ರತಿಭಟನೆ ಮಾಡಿ ಸಾರ್ವಜನಿಕರ ಗಮನ ಸೆಳೆದರು. ಲಿಖಿತ್ ರೈ ಅವರ ಹೋರಾಟಕ್ಕೆ ಎಲ್ಲಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು