7:21 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!!

12/08/2022, 00:09

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ತನ್ನ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.



ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ ಹೊಂಡಾಕ್ಕೆ ಬಿದ್ದು ಸ್ಕೂಟರ್ ಪಲ್ಟಿಯಾಗಿ ಪಕ್ಕದ ಡಿವೈಡರ್ ಮೇಲೆ ಬಿದ್ದಿದ್ದರು. ಬಿದ್ದ ಏಟಿಗೆ ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದರು. ತನ್ನ ಗೆಳೆಯನ ಸಾವಿನಿಂದ ತೀವ್ರವಾಗಿ ನೊಂದ ಲಿಖಿತ್  ರೈ  ಅವರು ರಸ್ತೆಯ ಗುಂಡಿಗಳಿಂದ ಸ್ವಾತಂತ್ರ್ಯ ಸಿಗಬೇಕು ಹಾಗೂ ಆತಿಶ್‌ಗೆ ನ್ಯಾಯ ದೊರಕಬೇಕು ಎಂದು ಆಗ್ರಹಿಸಿ ಕೈಯಲ್ಲಿ ದೊಡ್ಡ ಪೋಸ್ಟರ್ ಹಿಡಿದು

ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಏಕಾಂಗಿ ಪ್ರತಿಭಟನೆ ಮಾಡಿ ಸಾರ್ವಜನಿಕರ ಗಮನ ಸೆಳೆದರು. ಲಿಖಿತ್ ರೈ ಅವರ ಹೋರಾಟಕ್ಕೆ ಎಲ್ಲಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು