3:46 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಗೆ ಬಲಿಯಾದ ಎಂಜಿನಿಯರಿಂಗ್ ವಿದ್ಯಾರ್ಥಿ: ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಗೆಳೆಯನಿಂದ ಒಂಟಿ ಪ್ರತಿಭಟನೆ!!

12/08/2022, 00:09

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಾಣ ಕಳೆದುಕೊಂಡ ತನ್ನ ಆತ್ಮೀಯ ಗೆಳೆಯನ ಸಾವಿಗೆ ನ್ಯಾಯ ಕೊಡುವಂತೆ ಆಗ್ರಹಿಸಿ ಆತನ ಗೆಳೆಯನೊಬ್ಬ ನಗರದ ಲಾಲ್ ಬಾಗ್ ನಲ್ಲಿರುವ ಮಂಗಳೂರು ಮಹಾನಗರಪಾಲಿಕೆ ಕಚೇರಿ ಎದುರು ಒಂಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.



ನಂತೂರಿನಿಂದ ಬಿಕರ್ಣಕಟ್ಟೆ ಕಡೆಗೆ ಕೈನೆಟಿಕ್ ಸ್ಕೂಟರ್ ನಲ್ಲಿ ತೆರಳುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ, ದೇರೆಬೈಲ್ ಕೊಂಚಾಡಿಯ ಆತೀಶ್ ಶೆಟ್ಟಿ ಅವರು ರಸ್ತೆ ಹೊಂಡಾ ತಿಳಿಯದೆ ಹೊಂಡಾಕ್ಕೆ ಬಿದ್ದು ಸ್ಕೂಟರ್ ಪಲ್ಟಿಯಾಗಿ ಪಕ್ಕದ ಡಿವೈಡರ್ ಮೇಲೆ ಬಿದ್ದಿದ್ದರು. ಬಿದ್ದ ಏಟಿಗೆ ತಲೆಯಲ್ಲಿ ತೀವ್ರ ರಕ್ತಸ್ರಾವವಾಗಿ ಅವರು ಸಾವನ್ನಪ್ಪಿದ್ದರು. ತನ್ನ ಗೆಳೆಯನ ಸಾವಿನಿಂದ ತೀವ್ರವಾಗಿ ನೊಂದ ಲಿಖಿತ್  ರೈ  ಅವರು ರಸ್ತೆಯ ಗುಂಡಿಗಳಿಂದ ಸ್ವಾತಂತ್ರ್ಯ ಸಿಗಬೇಕು ಹಾಗೂ ಆತಿಶ್‌ಗೆ ನ್ಯಾಯ ದೊರಕಬೇಕು ಎಂದು ಆಗ್ರಹಿಸಿ ಕೈಯಲ್ಲಿ ದೊಡ್ಡ ಪೋಸ್ಟರ್ ಹಿಡಿದು

ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಏಕಾಂಗಿ ಪ್ರತಿಭಟನೆ ಮಾಡಿ ಸಾರ್ವಜನಿಕರ ಗಮನ ಸೆಳೆದರು. ಲಿಖಿತ್ ರೈ ಅವರ ಹೋರಾಟಕ್ಕೆ ಎಲ್ಲಡೆಯಿಂದ ಶ್ಲಾಘನೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು