6:02 AM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು!

26/02/2022, 19:32

ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ

info.reporterkarnataka.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು.


ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸರಕಾರದಿಂದ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ. ಈ ರಸ್ತೆಗಳನ್ನು ನೋಡಿಕೊಳ್ಳಲೆಂದು ಇಂಜಿನಿಯರ್ ಗಳಿಗೆ ನೇಮಿಸಿರುತ್ತಾರೆ. ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನೆಲ್ಲ ಮರೆತು ಗುತ್ತಿಗೆದಾರರು ಕೆಲಸ ಮಾಡದಿದ್ದರೂ  ಅವರಿಗೆ ಬಿಲ್ ಮಾಡುವ ಕೆಲಸ ನಡೆಸುತ್ತಿದ್ದಾರೆ. ಸರಿಯಾಗಿ ಗುಂಡಿ ಮುಚ್ಚುವ ಕೆಲಸ ಎಲ್ಲೂ ಆಗಿಲ್ಲ. ಹಾಗಾಗಿ ಇವರ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಗೆ ಪತ್ರಿಕೆ ಮುಖಾಂತರ ಮನವಿ ಮಾಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ ಎಂದು  ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು