11:49 PM Wednesday16 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ರಸ್ತೆ ಗುಂಡಿಯಲ್ಲೂ ಹಣ ಗುಳುಂ: ಹೊಂಡ ಮುಚ್ಚದಿದ್ದರೂ ಗುತ್ತಿಗೆದಾರರ ಬಿಲ್ ಪಾಸ್ ಮಾಡುವ ಎಂಜಿನಿಯರ್ ಗಳು!

26/02/2022, 19:32

ರಂಜಿನಿ ಕುಟ್ಟಪ್ಪ ಪೊನ್ನಂಪೇಟೆ ಮಡಿಕೇರಿ

info.reporterkarnataka.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆಯಿಂದ ಹಾಲೇರಿವರೆಗೆ ರಸ್ತೆಯ ಗುಂಡಿಗಳ ಮುಚ್ಚುವ ಕೆಲಸದಲ್ಲಿ ಅವ್ಯವಹಾರ ನಡೆದಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಆರೋಪಿಸಿದರು.


ರಸ್ತೆ ಗುಂಡಿ ಮುಚ್ಚುವ ಕೆಲಸಕ್ಕೆ ಸರಕಾರದಿಂದ ಲಕ್ಷಾಂತರ ರೂ. ಬಿಡುಗಡೆಯಾಗಿದೆ. ಈ ಹಣ ಗುತ್ತಿಗೆದಾರರ ಪಾಲಾಗುತ್ತಿದೆ. ಈ ರಸ್ತೆಗಳನ್ನು ನೋಡಿಕೊಳ್ಳಲೆಂದು ಇಂಜಿನಿಯರ್ ಗಳಿಗೆ ನೇಮಿಸಿರುತ್ತಾರೆ. ಆದರೆ ಲೋಕೋಪಯೋಗಿ ಇಂಜಿನಿಯರ್ ಗಳು ಇದನ್ನೆಲ್ಲ ಮರೆತು ಗುತ್ತಿಗೆದಾರರು ಕೆಲಸ ಮಾಡದಿದ್ದರೂ  ಅವರಿಗೆ ಬಿಲ್ ಮಾಡುವ ಕೆಲಸ ನಡೆಸುತ್ತಿದ್ದಾರೆ. ಸರಿಯಾಗಿ ಗುಂಡಿ ಮುಚ್ಚುವ ಕೆಲಸ ಎಲ್ಲೂ ಆಗಿಲ್ಲ. ಹಾಗಾಗಿ ಇವರ ಮೇಲೆ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮತ್ತು ಕೊಡಗು ಲೋಕೋಪಯೋಗಿ ಇಲಾಖೆಗೆ ಪತ್ರಿಕೆ ಮುಖಾಂತರ ಮನವಿ ಮಾಡಲಾಗಿದೆ. ಇದನ್ನು ಸರಿಪಡಿಸದಿದ್ದರೆ ಲೋಕಾಯುಕ್ತಕ್ಕೆ ಹಾಗೂ ರಾಜ್ಯ ಸರ್ಕಾರಕ್ಕೆ ದೂರು ಕೊಡಲು ಕರವೇ ಕಾರ್ಯಕರ್ತರು ಸಿದ್ಧಗೊಳ್ಳುತ್ತಿದ್ದಾರೆ ಎಂದು  ಕರವೇ ಅಧ್ಯಕ್ಷರು ಫ್ರಾನ್ಸಿಸ್ ಡಿಸೋಜ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು