4:07 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ರಸ್ತೆ ಮಧ್ಯದಲ್ಲೇ ಆಟೋ ಚಾಲಕನ ಯು ಟರ್ನ್: ಹೆಲ್ಮೆಟ್ ಧರಿಸದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

21/02/2023, 19:33

ಮಂಗಳೂರು(reporterkarnataka.com): ಆಟೋ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ಹೆಲ್ಮೆಟ್ ರಹಿತ ಪ್ರಯಾಣದಿಂದ ಯುವಕನೊಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದ ಹೃದಯ ವಿದ್ರಾವಕ ಘಟನೆ ನಗರದ ಬಿಜೈನಲ್ಲಿ ನಡೆಯಿತು.

ಪಾದಚಾರಿಗಳು, ದಾರಿ ಹೋಕರು ನೋಡು ನೋಡುತ್ತಿದ್ದಂತೆ ಈ ಘೋರ ದುರಂತ ನಡೆದೇ ಹೋಯಿತು.ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಬೈಕ್ ಸವಾರ ಹೆಲ್ಮೆಟ್ ಹಾಕದಿರುವುದು ಅಪಘಾತಕ್ಕೆ ಕಾರಣ ಸವಾರ ಕವನ್ ಆಳ್ವ(20) ಪ್ರಾಣ ಕಳೆದುಕೊಳ್ಳುವಂತಾಯಿತು.

ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದ್ದು ಆಟೋ ಚಾಲಕ ನಿರ್ಲಕ್ಷ್ಯದಿಂದ ರಸ್ತೆ ಮಧ್ಯದಿಂದಲೇ ಯು ಟರ್ನ್ ತಿರುವು ತೆಗೆದುಕೊಂಡಿದ್ದ. ಮುಂದಿನಿಂದ ಬರುತ್ತಿದ್ದ ಬೈಕ್ ಸವಾರ ಆಯತಪ್ಪಿ ರಿಕ್ಷಾಗೆ ಡಿಕ್ಕಿಯಾಗಿದ್ದು ರಸ್ತೆ ಬದಿಯ ಮರಕ್ಕೆ ಹೋಗಿ ಬಡಿದಿದ್ದಾನೆ. ತಲೆಯ ಭಾಗ ನೇರವಾಗಿ ಮರಕ್ಕೆ ಬಡಿದಿದ್ದರಿಂದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಿಜೈ ನಿವಾಸಿಯಾಗಿದ್ದು ನಗರದ ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ. ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆಯ ಪರಿಣಾಮ ಯುವಕ ಸಾವು ಕಂಡಿದ್ದಾನೆ. ಕದ್ರಿ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು