11:46 PM Sunday28 - June 2026
ಬ್ರೇಕಿಂಗ್ ನ್ಯೂಸ್
2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ರಸ್ತೆಗೆ ಅಡ್ಡ ಬಂದ ಹಸು: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಅದೃಷ್ಟವಶಾತ್ ಪ್ರಯಾಣಿಕರು ಪಾರು

01/09/2022, 09:05

ಕಾರ್ಕಳ(reporterkarnataka.com):
ರಸ್ತೆಗೆ ಅಡ್ಡ ಬಂದ ಹಸುವೊಂದನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಗುಂಡಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನ ಮಾಳ ಸಮೀಪ ಇಂದು ಸಂಜೆ ನಡೆದಿದೆ. 

ಕಾರು ಕಳಸದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದು, ಘಾಟಿ ಇಳಿದು ಮಾಳಕ್ಕೆ ಸಮೀಪಿಸುತ್ತಿದ್ದಂತೆ ಏಕಾಏಕಿಯಾಗಿ ಹಸುವೊಂದು ಕಾರಿಗೆ ಅಡ್ಡ ಬಂದಿದೆ. ಅದನ್ನು ತಪ್ಪಿಸಲು ಹೋದಂತಹ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು