3:42 AM Thursday26 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ರಸ್ತೆಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆ, ನೀರಿನ ಬಾಟ್ಲಿ: ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ‌ ಭಕ್ತರ ಕೃತ್ಯ; ಪ್ರತಿ ವರ್ಷವೂ ಇದೇ ಗೋಳು

03/03/2024, 12:38

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡು ಹಾಗೂ ದಕ್ಷಿಣ ಕನ್ನಡ ಸಂಪರ್ಕಿಸುವ ದಾರಿಯುದ್ದಕ್ಕೂ ತಿಂದು ಬಿಸಾಕಿದ ಪ್ಲಾಸ್ಟಿಕ್ ತಟ್ಟೆಗಳ ರಾಶಿ. ರಾಜ್ಯದ ವಿವಿಧ ಮೂಲೆಗಳಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುವ ಯಾತ್ರಿಗಳು ಈ ಪ್ಲಾಸ್ಟಿಕ್ ತಟ್ಟೆಗಳನ್ನು ಎಸೆದು ಹೋಗುತ್ತಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಧರ್ಮಸ್ಥಳ ಯಾತ್ರಿಗಳು ಸಾಗುವ ಮಾರ್ಗಯುದ್ಧಕ್ಕೂ ಪ್ಲಾಸ್ಟಿಕ್ ತಟ್ಟೆಗಳ ರಾಶಿ ಬಿದ್ದಿರುತ್ತದೆ. ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಯನ್ನು ಪಾದಯಾತ್ರಿಗಳು ಬೇಕಾಬಿಟ್ಟಿ ಎಸೆದು ಹೋಗಿರುತ್ತಾರೆ.
ಬಣಕಲ್ ಮುಖ್ಯ ರಸ್ತೆಯಲ್ಲಿ ರಾಶಿ ರಾಶಿ ಪ್ಲಾಸ್ಟಿಕ್ ಬಾಟಲ್ ಹಾಗೂ ಪ್ಲಾಸ್ಟಿಕ್ ತಟ್ಟೆಗಳು ಅನಾಥವಾಗಿ ಬಿದ್ದಿರುತ್ತವೆ.
ಧರ್ಮಸ್ಥಳ ಪಾದಯಾತ್ರೆಗಳ ವಿರುದ್ಧ ಸ್ಥಳೀಯರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಹೇಮಾವತಿ ನದಿಯ ಉದ್ದಕ್ಕೂ ಸ್ನಾನ ಹಾಗೂ ಶೌಚ ಮಾಡಿ ಹೇಮಾವತಿ ನದಿ ಮಲಿನವಾಗುತ್ತಿದೆ. ಶಿವರಾತ್ರಿ ಹಿನ್ನೆಲೆಯಲ್ಲಿ ಭಕ್ತರು ಪ್ರತಿ ವರ್ಷ ಪಾದಯಾತ್ರೆ ಕೈಗೊಳ್ಳುತ್ತಾರೆ. ಬಣಕಲ್ ಕೊಟ್ಟಿಗೆಹಾರ, ಚಾರ್ಮುಡಿ ಘಾಟ್ ಮೂಲಕ ಧರ್ಮಸ್ಥಳಕ್ಕೆ ಭಕ್ತರು ತೆರಳುತ್ತಾರೆ. ದಾರಿಯಲ್ಲಿ ಕೆಲವು ಸಂಘಟನೆಗಳು ಪಾದಯಾತ್ರಿಗಳಿಗೆ ಉಚಿತವಾಗಿ ಆಹಾರ ಒದಗಿಸುತ್ತಾರೆ. ಪ್ರತಿ ವರ್ಷವೂ ಇದೇ ಗೋಳು.

ಇತ್ತೀಚಿನ ಸುದ್ದಿ

ಜಾಹೀರಾತು