10:34 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು

18/03/2022, 21:23

ಮಂಗಳೂರು(reporterkarnataka.com):

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ.

ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ
ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್ಟಾರ ಚೌಕಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕೊಟ್ಟಾರ ಚೌಕಿಯ  ಅಮರಾನ್ ಬ್ಯಾಟರಿ ಸೇಲ್ಸ್ ಮತ್ತು ಸರ್ವಿಸ್  ಬಳಿ ರಸ್ತೆ ಅಪಘಾತಕ್ಕೀಡಾಗಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.

ಸದಾಶಿವ ಅವರು1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.ಅವರು ಪೊಲೀಸ್ ಕಾನ್ ಸ್ಟೇಬಲ್ ಆಗಿ ಮೊದಲಿಗೆ ಪಡುಬಿದ್ರೆ ಪೊಲೀಸ್ ಠಾಣೆ, ಸಂಚಾರ ಪೂರ್ವ ಪೊಲೀಸ್ ಠಾಣೆ, ಸಂಚಾರ ಪಶ್ಚಿಮ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಹೆಡ್ ಕಾನ್ ಸ್ಟೇಬಲ್ ಆಗಿ ಫಾರೆಸ್ಟ್ ಸ್ಕ್ಯಾಡ್,  ಸಂಚಾರ ಉತ್ತರ ಪೊಲೀಸ್ ಠಾಣೆ, ಸಿಎಸ್ಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

2019, ಜೂನ್  ನಿಂದದ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು