8:47 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ರಸ್ತೆ ಅಪಘಾತ: ಗಾಯಾಳು ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಮೃತ್ಯು

18/03/2022, 21:23

ಮಂಗಳೂರು(reporterkarnataka.com):

ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಸಹಾಯಕ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರು ಮೃತಪಟ್ಟಿದ್ದಾರೆ.

ಅವರು ಮಾ. 14 ರಂದು ರಾತ್ರಿ 9-10ರ ವೇಳೆಗೆ
ಸಂಚಾರ ನಿಯಂತ್ರಣ ಕರ್ತವ್ಯದ ಬಗ್ಗೆ ಕೊಟ್ಟಾರ ಚೌಕಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಕೊಟ್ಟಾರ ಚೌಕಿಯ  ಅಮರಾನ್ ಬ್ಯಾಟರಿ ಸೇಲ್ಸ್ ಮತ್ತು ಸರ್ವಿಸ್  ಬಳಿ ರಸ್ತೆ ಅಪಘಾತಕ್ಕೀಡಾಗಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾರೆ.

ಸದಾಶಿವ ಅವರು1993ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.ಅವರು ಪೊಲೀಸ್ ಕಾನ್ ಸ್ಟೇಬಲ್ ಆಗಿ ಮೊದಲಿಗೆ ಪಡುಬಿದ್ರೆ ಪೊಲೀಸ್ ಠಾಣೆ, ಸಂಚಾರ ಪೂರ್ವ ಪೊಲೀಸ್ ಠಾಣೆ, ಸಂಚಾರ ಪಶ್ಚಿಮ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಹೆಡ್ ಕಾನ್ ಸ್ಟೇಬಲ್ ಆಗಿ ಫಾರೆಸ್ಟ್ ಸ್ಕ್ಯಾಡ್,  ಸಂಚಾರ ಉತ್ತರ ಪೊಲೀಸ್ ಠಾಣೆ, ಸಿಎಸ್ಬಿ ಘಟಕದಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

2019, ಜೂನ್  ನಿಂದದ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು