3:49 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಕ್ರೀಡಾಕೂಟ: ಕಬ್ಬಡಿಯಲ್ಲಿ ತರುವೆ ಏಕಲವ್ಯ ವಸತಿ ಶಾಲೆಗೆ ಚಿನ್ನ

26/12/2022, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಕೊಟ್ಟಿಗೆಹಾರ ತಾಲೂಕಿನ ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ಮಕ್ಕಳು ಕಬಡ್ಡಿ ಆಟದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಈ ತಿಂಗಳ 17ರಿಂದ 19ರ ವರೆಗೆ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ನಡೆದಂತಹ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಎದುರಾಳಿ ತಂಡವಾದ ತೆಲಂಗಾಣವನ್ನು ಅತಿ ಹೆಚ್ಚು ಅಂಕಗಳಿಂದ ಸೋಲಿಸುವುದರ ಮೂಲಕ ಕರ್ನಾಟಕದಿಂದ ಪ್ರತಿನಿಧಿಯಾದ ತರುವೆ ಶಾಲೆಯ ಮಕ್ಕಳು ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಚಿಕ್ಕಮಗಳೂರು ಜಿಲ್ಲೆಗೆ ಕೀರ್ತಿಯನ್ನು ತಂದಿರುತ್ತಾರೆ. ಏಕಲವ್ಯ ಶಾಲೆ ಮೂರನೇ ಬಾರಿ ಈ ಸಾಧನೆ ಮಾಡಿದೆ ಎಂದು ಪ್ರಾಂಶುಪಾಲರು ತಿಳಿಸಿರುತ್ತಾರೆ.

ಶಾಲೆಯ ಮಕ್ಕಳಾದ ಅಂಕಿತ, ವಿಜಯದಶಮಿ, ವಿಜಯಲಕ್ಷ್ಮಿ ,ಸುಕನ್ಯಾ ,ಅರ್ಪಿತ ,ಸ್ಪಂದನ ,ಸಾನಿಕ ಮತ್ತು ಚಾಮರಾಜ ಜಿಲ್ಲೆಯ ಮಂಗಳ ಶಾಲೆಯ ಮೂರು ಮಕ್ಕಳು ಸೇರಿ ಈ ಕೀರ್ತಿಯನ್ನು ತಂದಿರುತ್ತಾರೆ ಎಂದು ಶಾಲೆಯ ವಾರ್ಡನ್ ಆದ ಕಲ್ಲೇಶ್ ಮತ್ತು ಪ್ರಾಂಶುಪಾಲರದ ಅಕ್ಷತಾ ಅವರು ತಿಳಿಸಿದ್ದಾರೆ. ಶಾಲೆಯಿಂದ ತರಬೇತುದಾರರಾದಂತಹ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಸನ್ನ ರವರು ಮತ್ತು ಸುಶ್ರೂಕಿಯಾದಂತಹ ಶೋಭಾ ಅವರು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.

ಈ ಸಾಧನೆಯನ್ನು ಕುರಿತು ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಕ್ರೈಸ್ ಸಂಸ್ಥೆಯ ಎಲ್ಲಾ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು