9:29 AM Sunday17 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಮಣಿಪುರ ಕಳರಿ ಫೈಟ್: ಸುಂಕದಕಟ್ಟೆ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸತೀಶ್ ಎಸ್. ಗೆ ಕಂಚು

09/10/2024, 23:01

ಬಂಟ್ವಾಳ(reporterkarnataka.com): ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿ ಈ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.
ಕಳೆದ ಸೆ.21 ಮತ್ತು 22 ರಂದು ವಿಜಯಪುರದಲ್ಲಿ ನಡೆದ 5ನೇ ರಾಜ್ಯಮಟ್ಟದ ಥಾಂಗ್ ತಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.
ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಪೊಳಲಿ ಸರಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಹಾಗೂ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಅವರ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾಚೈತನ್ಯನಂದ‌ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು