2:06 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ರಾಷ್ಟ್ರಮಟ್ಟದ ಮಣಿಪುರ ಕಳರಿ ಫೈಟ್: ಸುಂಕದಕಟ್ಟೆ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ವಿದ್ಯಾರ್ಥಿ ಸತೀಶ್ ಎಸ್. ಗೆ ಕಂಚು

09/10/2024, 23:01

ಬಂಟ್ವಾಳ(reporterkarnataka.com): ಮಧ್ಯಪ್ರದೇಶದ ಥಾಂಗ್-ತಾ ಅಸೋಸಿಯೆಷನ್ ವತಿಯಿಂದ‌ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರೀಯ ಜೂನಿಯರ್ ತಾಂಗ್- ತಾ( ಮಣಿಪುರ ಕಳರಿ ಫೈಟ್) ಚಾಂಪಿಯನ್ ಶಿಪ್ ನಲ್ಲಿ ಸುಂಕದಕಟ್ಟೆ ನಿರಂಜನಾನಂದ ಸ್ವಾಮಿ ಪಾಲಿಟೆಕ್ನಿಕ್ ನ ಮೆಕ್ಯಾನಿಕಲ್ ವಿಭಾಗದ ಪ್ರಥಮ‌ ವರ್ಷದ ಡಿಪ್ಲೋಮ ವಿದ್ಯಾರ್ಥಿ ಸತೀಶ್ ಎಸ್. ತೃತೀಯ ಸ್ಥಾನಿಯಾಗಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಅ.5 ರಿಂದ ಅ.7 ರವರೆಗೆ ತಾಂಗ್- ತಾ ಫೆಡರೇಷನ್ ಆಫ್ ಇಂಡಿಯದ ಸಹಕಾರದೊಂದಿಗೆ ನಡೆದ ಈ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿ ಈ ಸಾಧನೆ ಮಾಡಿ ರಾಜ್ಯಕ್ಕೆ ಕೀರ್ತಿ ತಂದಿದ್ದಾನೆ.
ಕಳೆದ ಸೆ.21 ಮತ್ತು 22 ರಂದು ವಿಜಯಪುರದಲ್ಲಿ ನಡೆದ 5ನೇ ರಾಜ್ಯಮಟ್ಟದ ಥಾಂಗ್ ತಾ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದರು.
ಪೊಳಲಿ ಶ್ರೀರಾಮಕೃಷ್ಣ ತಪೋವನದಲ್ಲಿ ಪೊಳಲಿ ಸರಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಯಂತ್ ಆಚಾರ್ಯ ಹಾಗೂ ಮಾರ್ಷಲ್ ಆರ್ಟ್ ತರಬೇತುದಾರ ರಾಜೇಶ್ ಬ್ರಹ್ಮಕೂಟ್ಲು ಅವರಿಂದ ತರಬೇತಿ ಪಡೆಯುತ್ತಿದ್ದಾರೆ. ಸತೀಶ್ ಅವರ ಸಾಧನೆಗೆ ಪೊಳಲಿ ಶ್ರೀ ರಾಮಕೃಷ್ಣ ತಪೋವನದ ಶ್ರೀ ವಿವೇಕಾಚೈತನ್ಯನಂದ‌ ಸ್ವಾಮೀಜಿ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು