7:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ  ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ

30/06/2022, 12:40

ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.

ಇನ್ನು ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಅನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ ಟೀಂ ಅಂತ ಪ್ರಚಾರ ಮಾಡೋದು ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು