5:59 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ  ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ

30/06/2022, 12:40

ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.

ಇನ್ನು ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಅನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ ಟೀಂ ಅಂತ ಪ್ರಚಾರ ಮಾಡೋದು ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು