5:21 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಎನ್ ಡಿ. ಎ ಅಭ್ಯರ್ಥಿ  ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಮಾಜಿ ಸಿಎಂ ಎಚ್ ಡಿಕೆ ಇಂಗಿತ

30/06/2022, 12:40

ಬೆಂಗಳೂರು(reporterkarnataka.com): ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ ಗೆದ್ದಾಗಿದೆ.‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ. ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಹೇಳಿದರು.

ಇನ್ನು ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಅನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ ಟೀಂ ಅಂತ ಪ್ರಚಾರ ಮಾಡೋದು ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು