12:46 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಷ್ಟ್ರಧ್ಬಜವನ್ನು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಮಡಚಿಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

15/08/2022, 15:13

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಯಾರಿಗಾದರೂ ಧ್ವಜವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಡಲು ಆಗದಿದ್ದರೆ ಅಥವಾ ಎಲ್ಲಿಯಾದರೂ ಧ್ವಜಗಳು ಸಿಕ್ಕಿದರೆ ಅದನ್ನು ಹತ್ತಿರದ ಸ್ಥಳೀಯಾಡಳಿತ ಅಥವಾ ಸರ್ಕಾರಿ ಕಚೇರಿಗೆ ತಲುಪಿಸಿ. ಧ್ವಜವನ್ನು ಹಾರಿಸುವಾಗ ಪಾಲಿಸಿದಂತೆ ಮತ್ತು ಇಂದು ಸಂಜೆ ಇಳಿಸುವಾಗಲೂ ಅದರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅದರ ಘನತೆ ಎತ್ತಿ ಹಿಡಿಯಬೇಕು. ಧ್ವಜ ಇಳಿಸುವ ವೇಳೆ ಯಾವುದೇ ಕಾರಣಕ್ಕೂ ನೆಲಕ್ಕೆ, ನೀರಿಗೆ ತಾಗಿಸದೇ, ಬಣ್ಣಗಳು ಅದಲು ಬದಲು ಆಗದಂತೆ ನೋಡಿಕೊಳ್ಳಿ. ಧ್ವಜಗಳು ಯಾವುದೇ ರೂಪದಲ್ಲಿದ್ದರೂ ಅದನ್ನು ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಸ್ಥಳೀಯಾಡಳಿತಕ್ಕೆ ತಲುಪಿಸಿ. ಯಾವುದೇ ಕಾರಣಕ್ಕೂ ಅದಕ್ಕೆ ಅಗೌರವ ತರಬೇಡಿ. ಜೊತೆಗೆ ಧ್ವಜಕ್ಕೆ ಅಗೌರವ ತರುವಂತಹ ಯಾವುದೇ ಫೋಟೋ-ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಬೇಡಿ. ಇದನ್ನು ಎಲ್ಲಾ ಪ್ರಜ್ಞಾವಂತ ನಾಗರಿಕರು ಪಾಲಿಸಬೇಕು ಎಂದು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು