11:15 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ರಾಷ್ಟ್ರಧ್ಬಜವನ್ನು ಸೂರ್ಯಾಸ್ತದೊಳಗೆ ನಿಯಮಬದ್ಧವಾಗಿ ಮಡಚಿಡುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

15/08/2022, 15:13

ಮಂಗಳೂರು(reporterkarnataka.com): ಸ್ವಾತಂತ್ರ್ಯದ ಆಚರಣೆಯು ಈಗಾಗಲೇ ಮುಗಿದಿದ್ದು, ಇಂದು ಸಂಜೆ ಸೂರ್ಯಾಸ್ತಮಾನದೊಳಗೆ ನಿಯಮಬದ್ಧವಾಗಿ ಸುರಕ್ಷಿತವಾಗಿ ಮಡಚಿಡುವಂತೆ ಎಲ್ಲಾ ಸಾರ್ವಜನಿಕರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಯಾರಿಗಾದರೂ ಧ್ವಜವನ್ನು ಸುರಕ್ಷಿತವಾಗಿ ಮನೆಯಲ್ಲಿ ಇಡಲು ಆಗದಿದ್ದರೆ ಅಥವಾ ಎಲ್ಲಿಯಾದರೂ ಧ್ವಜಗಳು ಸಿಕ್ಕಿದರೆ ಅದನ್ನು ಹತ್ತಿರದ ಸ್ಥಳೀಯಾಡಳಿತ ಅಥವಾ ಸರ್ಕಾರಿ ಕಚೇರಿಗೆ ತಲುಪಿಸಿ. ಧ್ವಜವನ್ನು ಹಾರಿಸುವಾಗ ಪಾಲಿಸಿದಂತೆ ಮತ್ತು ಇಂದು ಸಂಜೆ ಇಳಿಸುವಾಗಲೂ ಅದರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಅದರ ಘನತೆ ಎತ್ತಿ ಹಿಡಿಯಬೇಕು. ಧ್ವಜ ಇಳಿಸುವ ವೇಳೆ ಯಾವುದೇ ಕಾರಣಕ್ಕೂ ನೆಲಕ್ಕೆ, ನೀರಿಗೆ ತಾಗಿಸದೇ, ಬಣ್ಣಗಳು ಅದಲು ಬದಲು ಆಗದಂತೆ ನೋಡಿಕೊಳ್ಳಿ. ಧ್ವಜಗಳು ಯಾವುದೇ ರೂಪದಲ್ಲಿದ್ದರೂ ಅದನ್ನು ಸ್ಥಳೀಯ ಸರ್ಕಾರಿ ಕಚೇರಿ ಅಥವಾ ಸ್ಥಳೀಯಾಡಳಿತಕ್ಕೆ ತಲುಪಿಸಿ. ಯಾವುದೇ ಕಾರಣಕ್ಕೂ ಅದಕ್ಕೆ ಅಗೌರವ ತರಬೇಡಿ. ಜೊತೆಗೆ ಧ್ವಜಕ್ಕೆ ಅಗೌರವ ತರುವಂತಹ ಯಾವುದೇ ಫೋಟೋ-ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಬೇಡಿ. ಇದನ್ನು ಎಲ್ಲಾ ಪ್ರಜ್ಞಾವಂತ ನಾಗರಿಕರು ಪಾಲಿಸಬೇಕು ಎಂದು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು