2:35 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ಚುನಾವಣೆ: ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ

10/06/2022, 20:21

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೊಸ ಕಾರ್ಯತಂತ್ರ ರೂಪಿಸಲು ಸಿದ್ಧತೆ ನಡೆಸಿದೆ. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹೊಸ ತಂತ್ರವನ್ನು ರೂಪಿಸುತ್ತಿದ್ದಾರೆ ಎನ್ನಲಾಗಿದೆ. ಇತರ ರಾಜಕೀಯ ಪಕ್ಷಗಳ ಮುಖ್ಯಸ್ಥರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ನಾಯಕಿ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸಿದ್ದಾರೆ. ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಸೇರಿದಂತೆ ಪ್ರತಿಪಕ್ಷ ನಾಯಕರನ್ನು ಸಂಪರ್ಕಿಸಿ ರಾಷ್ಟ್ರಪತಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಯಾರನ್ನು ನಾಮನಿರ್ದೇಶನ ಮಾಡಬೇಕು ಎಂಬ ಬಗ್ಗೆ ಒಮ್ಮತ ಮೂಡಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರೊಬ್ಬರು ಪ್ರತಿಕ್ರಿಯಿಸಿದ್ದು “ಎನ್‌ಡಿಎಯೇತರ ಹಾಗೂ ಯುಪಿಎಯೇತರ ಪಕ್ಷಗಳ ಮನಸ್ಥಿತಿಯನ್ನು ಕಂಡು ಹಿಡಿಯುವ ಕೆಲಸವನ್ನು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲಾಗಿದೆ. ಅವರು ವಿರೋಧ ಪಕ್ಷದ ನಾಯಕರೊಂದಿಗೆ ಸಭೆ ನಡೆಸಿ ಅಭ್ಯರ್ಥಿಗಳ ಸಂಭಾವ್ಯ ಹೆಸರುಗಳನ್ನು ಕಂಡುಹಿಡಿಯುತ್ತಾರೆ” ಎಂದಿರುವ ಕುರಿತು ಮೂಲಗಳು ವರದಿ ಮಾಡಿವೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಅವರ ಅಧಿಕಾರಾವಧಿ ಜುಲೈ 24ರಂದು ಕೊನೆಗೊಳ್ಳಲಿದ್ದು ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಗುರುವಾರ ಘೋಷಿಸಿದೆ. ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ರಾಜೀವ್ ಕುಮಾರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು