6:03 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ವಿವರಣೆ

07/02/2025, 07:31

ನವದೆಹಲಿ(reporterkarnataka.com): ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.
ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.


ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.
ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಯ ಪುನಶ್ಚೇತನಕ್ಕೆ ₹11,400 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ ₹20,000 ಕೋಟಿಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು